Tuesday, April 7, 2026
Tuesday, April 7, 2026

ಗಾಣಿಗ ಜಾತಿ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟನೆ-ತೀರ್ಪು

Date:

ಉತ್ತರ ಕರ್ನಾಟಕದಲ್ಲಿ ಕಂಡುಬರುವ ಗಾಣಿಗೇರ್ ಎಂಬುದು ಗಾಣಿಗ ಪದದ ರೂಪಾಂತರವಾಗಿದೆ. ಹಿಂದೂ ಗಾಣಿಗ ಮತ್ತು ಲಿಂಗಾಯತ ಗಾಣಿಗ 2 ವಿಭಿನ್ನ ಜಾತಿಗಳಲ್ಲ. ಎರಡೂ ಒಂದೇ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಒಬಿಸಿ ಮೀಸಲಾತಿಗಾಗಿ ಸಂಗಪ್ಪ ಹಸನಪ್ಪ ಮಾಳೆಣ್ಣನವರ್ ಎಂಬುವರಿಗೆ ನೀಡಿದ್ದ ಗಾಣಿಗ ಜಾತಿ ಪ್ರಮಾಣ ಪತ್ರದ ವಿರುದ್ಧ ಏಕ ಪೀಠದ ತೀರ್ಪನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶದ ವಿರುದ್ಧ ಎಂವಿ ಚಂದ್ರಕಾಂತ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ ಕೆ ಮಹೇಶ್ವರಿ ಅವರ ಪೀಠ ವಜಾಗೊಳಿಸಿದೆ.

ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಆಯ್ಕೆಯಾದ 1999ರ ಬ್ಯಾಚ್ ಅಭ್ಯರ್ಥಿಗಳಲ್ಲಿ ಸಂಗಪ್ಪ ಕೂಡ ಒಬ್ಬರು. ಉಪ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ಚಂದ್ರಕಾಂತ್ ಹಾಗೂ ಸಹಾಯಕ ಆಯುಕ್ತ ಹುದ್ದೆಗೆ ಸಂಗಪ್ಪ ಆಯ್ಕೆಯಾಗಿದ್ದಾರೆ. 2005ರಲ್ಲಿ ಸಂಗಪ್ಪ ಅವರ ತಂದೆ ಲಿಂಗಾಯತ ಜಾತಿಗೆ ಸೇರಿದವರು ಎಂದು ತನಗೆ ಗೊತ್ತಾಯಿತು. ಆದರೆ, ಸಂಗಪ್ಪ ಅವರು ಗಾಣಿಗ ಜಾತಿಗೆ ಸೇರಿದವರು ಎಂದು ಹೇಳಿಕೊಂಡು ಮೀಸಲಾತಿಯ ಲಾಭವನ್ನು ಪಡೆದಿದ್ದರು ಎಂದು ಚಂದ್ರಕಾಂತ್ ವಾದಿಸಿದರು.

ಈ ವಿಷಯ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಪೀಠವು, ಸಂಗಪ್ಪ ಅವರ ತಂದೆ ಹಿಂದೂ ಲಿಂಗಾಯತ ಜಾತಿಗೆ ಸೇರಿದವರು ಎಂದು ಶಾಲೆಯ ದಾಖಲೆಗಳು ಬಹಿರಂಗಪಡಿಸುತ್ತವೆ. ಆದರೆ, ಅವರ ಮಗ ಗಾಣಿಗ ಸಮುದಾಯ ಎಂದು ಹೇಳಿಕೊಂಡಿರುವುದು ಸರಿಯಲ್ಲ ಎಂದಿತ್ತು. ಆದರೆ, ವಿಭಾಗೀಯ ಪೀಠವು ಏಕ ಪೀಠದ ಆದೇಶವನ್ನು ತಳ್ಳಿಹಾಕಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...