Wednesday, April 8, 2026
Wednesday, April 8, 2026

ನಾನು ಯಾವತ್ತೂ ಜನ್ಮದಿನ ಆಚರಿಸಿಕೊಂಡವನಲ್ಲ- ಸಿದ್ಧರಾಮಯ್ಯ

Date:

ರಾಜ್ಯಾದ್ಯಂತ ದಾವಣಗೆರೆಯಲ್ಲಿ ಆ.3 ರಂದು ನಡೆಯಲಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಸಮಾವೇಶದ ಬಗ್ಗೆಯೇ ಚರ್ಚೆ ನಡೆದಿದೆ. ವರ್ಷದೊಳಗೆ ಎದುರಾಗಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಪ್ರೀತಿಯಿಂದ ಕರೆಯುವ ಸಿದ್ದರಾಮೋತ್ಸವ ರಾಜಕೀಯ ವಲಯದಲ್ಲಿ ಮಹತ್ವ ಪಡೆದಿದೆ. ಈ ಸಮಾವೇಶಕ್ಕೆ ಪೂರ್ವಭಾವಿಯಾಗಿ ರಾಜ್ಯ ರಾಜಕೀಯದ ಬೆಳವಣಿಗೆಗಳು, ಬಿಜೆಪಿ ಆಡಳಿತ, ಕಾಂಗ್ರೆಸ್ ಮುಂದಿರುವ ಸವಾಲುಗಳ ಬಗ್ಗೆ ಸಿದ್ದರಾಮಯ್ಯನವರು ಮುಕ್ತವಾಗಿ ಮಾತನಾಡಿದ್ದಾರೆ.

ನಾನು ಯಾವತ್ತೂ ಜನ್ಮದಿನ ಆಚರಿಸಿಕೊಂಡವನಲ್ಲ. ಏಕೆಂದರೆ ಅದು ನನ್ನ ನಿಜವಾದ ಹುಟ್ಟುಹಬ್ಬವಲ್ಲ. ಶಾಲೆಯಲ್ಲಿ ಮಾಸ್ಟರ್ ನಮೂದಿಸಿದ ದಿನಾಂಕ. ನನ್ನ ಕೆಲ ಸ್ನೇಹಿತರು ಹಾಗೂ ಹಿತೈಷಿಗಳು ಆ ದಿನಾಂಕದ ಪ್ರಕಾರ 75 ವರ್ಷ ಆಗುತ್ತದೆ, ರಾಜಕಾರಣಕ್ಕೆ ಬಂದು 45 ವರ್ಷ ಆಗುತ್ತದೆ ಎಂಬ ಕಾರಣಕ್ಕೆ ಆಚರಣೆ ಮಾಡುತ್ತಿದ್ದಾರೆಯೇ ಹೊರತು ಬೇರೆ ಯಾವ ಉದ್ದೇಶವೂ ಇಲ್ಲ. ಇದು ನನಗಾಗಿ ಮಾಡುತ್ತಿರುವ ಉತ್ಸವವೂ ಅಲ್ಲ. ಇಂದಿನ ರಾಜಕೀಯ ವ್ಯವಸ್ಥೆ, ದೇಶದ ಮುಂದಿರುವ ಸಮಸ್ಯೆ ಮೆಲಕು ಹಾಕಲು, ಪರಿಹಾರ ಕಂಡುಕೊಳ್ಳಲು, ಜನರನ್ನು ಎಚ್ಚರಿಸಲು ಚರ್ಚೆಗಳು ನಡೆಯುವ ಒಂದು ಕಾರ್ಯಕ್ರಮವಾಗಿರುತ್ತದೆ. ನಾನು ನಿಮಿತ್ತ ಮಾತ್ರ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...