Friday, February 6, 2026
Friday, February 6, 2026

ಸಿನಿಮಾ ರೇಸ್ ನಲ್ಲಿಹಿಂದಿ ಶಂಶೇರಾ ಗಿಂತ ಕನ್ನಡ ವಿಕ್ರಾಂತ್ ರೋಣ ಗೆ ಭರ್ಜರಿ ಓಪನಿಂಗ್

Date:

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದ್ದು, ಚಿತ್ರ ಬಿಡುಗಡೆಯಾದ 3 ದಿನಗಳಲ್ಲಿ ರಣಬೀರ್ ಕಪೂರ್ ಅಭಿನಯದ ಶಂಶೇರಾ ಚಿತ್ರದ ಮೊದಲ ವಾರಾಂತ್ಯದ ಕಲೆಕ್ಷನ್‌ ನ್ನು ಹಿಂದಿಕ್ಕಿದೆ.

ವಿಕ್ರಾಂತ್ ರೋಣಾಗೆ ಎಲ್ಲೆಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆರಂಭಿಕ ಅಂದಾಜಿನ ಪ್ರಕಾರ, ಚಿತ್ರವು 3 ನೇ ದಿನಕ್ಕೆ ಸುಮಾರು 10 ಕೋಟಿ ರೂಪಾಯಿ ಗಳಿಸಿದೆ ಎನ್ನಲಾಗುತ್ತಿದೆ.

ವಿಕ್ರಾಂತ್ ರೋಣ ಒಂದು ಫ್ಯಾಂಟಸಿ ಆ್ಯಕ್ಷನ್ ಚಿತ್ರವಾಗಿದ್ದು, ಅನೂಪ್ ಭಂಡಾರಿ ಬರೆದು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಕಿಚ್ಚ ಸುದೀಪ್, ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ರಕ್ಕಮ್ಮ ಹಾಡು ಎಲ್ಲೆಡೆ ಫೇಮಸ್ ಆಗಿದೆ.

ವಿಕ್ರಾಂತ್ ರೋಣಾ ಸಿನಿಮಾವನ್ನು ರಣಬೀರ್ ಕಪೂರ್ ಅವರ ಬಾಲಿವುಡ್ ಸಿನಿಮಾ ಶಂಶೇರಾಗೆ ಹೋಲಿಸಿದರೆ, ಕಳೆದ 3 ದಿನಗಳಿಂದ ಶಂಶೇರಾ ಕೇವಲ 31 ಕೋಟಿ ರೂಪಾಯಿ ಗಳಿಸಿದೆ. ಜುಲೈ 22ರಂದು ತೆರೆಕಂಡ ಶಂಶೇರಾ ಸಿನಿಮಾದ ಕಲೆಕ್ಷನ್, ವಿಕ್ರಾಂತ್ ರೋಣ ಬಿಡುಗಡೆಯಾದ ಬಳಿಕ ಮತ್ತಷ್ಟು ಕಡಿಮೆಯಾಗಿದೆ.
ಇನ್ನು ವಿಕ್ರಾಂತ್ ರೋಣಾ ಚಿತ್ರ 2500 ಪರದೆಗಳಲ್ಲಿ ರಿಲೀಸ್ ಆಗಿದ್ದರೆ, ಶಂಶೇರಾ 5,250 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದೆ. ಹೀಗಿದ್ದರೂ ಕಲೆಕ್ಷನ್ ವಿಚಾರದಲ್ಲಿ ಅದು ಸೋತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...