Thursday, February 5, 2026
Thursday, February 5, 2026

ಹೊಸ ಶಿಕ್ಷಣ ನೀತಿಯಿಂದ, ಜಾಗತಿಕ ಗುಣಮಟ್ಟ

Date:

ಕುವೆಂಪು ವಿಶ್ವವಿದ್ಯಾಲಯದಲ್ಲಿ ನೂತನ ಶಿಕ್ಷಣ ಕುರಿತು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಹೊಸ ಶಿಕ್ಷಣ ನೀತಿಯ ಅನುಷ್ಠಾನದಲ್ಲಿ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರ ಪಾತ್ರ ಮಹತ್ತರವಾದದ್ದು, ಈ ರೀತಿಯ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯನ್ನು ತರಲಿದೆ ಅದಕ್ಕೆ ಸೂಕ್ತ ಕ್ರಮಗಳು ಅಗತ್ಯವಿದ್ದು, ನಮ್ಮಿಂದ ಅದು ಆರಂಭವಾಗಲಿ. 3 ದಶಕಗಳ ಬಳಿಕ ಕೇಂದ್ರ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷೆಯ ಶಿಕ್ಷಣ ನೀತಿ ಇದಾಗಿದೆ. ಭಾರತೀಯ ಶೈಕ್ಷಣಿಕ ವ್ಯವಸ್ಥೆಗೆ ಜಾಗತಿಕ ಗುಣಮಟ್ಟವನ್ನು ತಂದುಕೊಡಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ.ಅನುರಾಧ ಅವರು ‘ ನೂತನ ಶಿಕ್ಷಣ ನೀತಿಯನ್ನು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಯಾವುದೇ ರೀತಿಯ ಗೊಂದಲಗಳು ಉಂಟಾದಲ್ಲಿ ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಭೂಗರ್ಭಶಾಸ್ತ್ರ ವಿಭಾಗದ ಪ್ರೊ. ಸೈಯದ್ ಅಶ್ಫಕ್ ಅಹಮ್ಮದ್ ಅವರು ನೂ ತನ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳ ಪ್ರವೇಶ, ತರಗತಿಗಳು,ಪರೀಕ್ಷೆ, ಕ್ರೆಡಿಟ್ ಪಾಯಿಂಟ್ ಕುರಿತು ವಿವಿಧ ಕಾಲೇಜುಗಳಿಂದ ಆಗಮಿಸಿದ ಅಧ್ಯಾಪಕರುಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಐಕ್ಯೂಎಸಿ ನಿರ್ದೇಶಕ ಪ್ರೊ. ಹೆಚ್. ಎಸ್.ಜಯಣ್ಣ, ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು, ಅಧ್ಯಾಪಕರು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...