Thursday, July 9, 2026
Thursday, July 9, 2026

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನ ಮಹತ್ವದ ಸಭೆ

Date:

ಮಹತ್ವದ ರಾಜ್ಯ ಕಾಂಗ್ರೆಸ್‌ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ಹುಬ್ಬಳ್ಳಿಯಲ್ಲಿ ರಾಹುಲ್‌ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿತು.

ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ , ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್‌, ರಾಮಲಿಂಗಾ ರೆಡ್ಡಿ, ಸತೀಶ್‌ ಜಾರಕಿಹೊಳಿ, ಈಶ್ವರ್‌ ಖಂಡ್ರೆ, ಧುೃವನಾರಾಯಣ ಪಾಲ್ಗೊಂಡಿದ್ದ ಸಭೆಯಲ್ಲಿ ಸಾಮೂಹಿಕ ನಾಯಕತ್ವದಡಿ ಎಲ್ಲರೂ ಒಗ್ಗೂಡಿ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ರಾಹುಲ್‌ ಗಾಂಧಿ ಕಿವಿಮಾತು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಮುಂದಿನ ಮುಖ್ಯಮಂತ್ರಿ ವಿಚಾರ ಯಾರೂ ಮಾತನಾಡುವುದು ಬೇಡ. ಅದು ಬಿಜೆಪಿ ಹಾಗೂ ಜೆಡಿಎಸ್‌ಗೆ ನಾವೇ ಅಸ್ತ್ರ ಕೊಟ್ಟಂತೆ ಆಗುತ್ತದೆ. ಎಲ್ಲರೂ ಹೈಕಮಾಂಡ್‌ ವಹಿಸಿದ ಜವಾಬ್ದಾರಿ ನಿರ್ವಹಿಸಬೇಕು. ಅನಗತ್ಯ ಗೊಂದಲಕ್ಕೆ ಅವಕಾಶ ಮಾಡಿಕೊಡಬಾರದು ಎಂದು ತಾಕೀತು ಮಾಡಲಾಯಿತು ಎಂದು ಹೇಳಲಾಗಿದೆ.

ಸಭೆಯಲ್ಲಿ ಭಾಗವಹಿಸಿದ್ದವರು ಮುಂದಿನ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ತಮ್ಮದೇ ಆದ ಅಭಿಪ್ರಾಯ ಮತ್ತೆ ಸಲಹೆ ನೀಡಿದರು. ರಾಹುಲ್‌ ಗಾಂಧಿ ಎಲ್ಲರ ಅಭಿಪ್ರಾಯ ಸಹನೆಯಿಂದ ಅಲಿಸಿದರು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...