Saturday, March 15, 2025
Saturday, March 15, 2025

ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅನುಮತಿ

Date:

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಆಚರಣೆ ಸಂಬಂಧ, ಕರ್ನಾಟಕ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೀಪಾವಳಿಯ ವೇಳೆ ಹಸಿರು ಪಟಾಕಿ ಗೆ ಮಾತ್ರ ಅವಕಾಶವಿದ್ದು, ಉಳಿದ ಇತರೆ ಸಿಡಿಮದ್ದುಗಳ ಮಾರಾಟಕ್ಕೆ ಅವಕಾಶವಿಲ್ಲ. ಹಸಿರು ಪಟಾಕಿಯ ಮಾರಾಟಕ್ಕೆ ದಿನಾಂಕವನ್ನು ನಿಗದಿಗೊಳಿಸಲಾಗಿದೆ. ನವೆಂಬರ್ 1ರಿಂದ 10ರವರೆಗೆ ಪಟಾಕಿ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅಧಿಕೃತ ಪರವನಾಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಲು ಅವಕಾಶ ಇದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪಟಾಕಿಗಳನ್ನು ಸಾರ್ವಜನಿಕ ವಸತಿ ಸ್ಥಳದಿಂದ ದೂರವಿರುವ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಬೇಕು. ಮಳೆಗೆ ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹಾಗೂ ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುತ್ತಿರಬೇಕು. ಒಂದು ಮಾರಾಟ ಮಳಿಗೆಗೂ ಹಾಗೂ ಇನ್ನೊಂದು ಮಾರಾಟ ಮಳಿಗೆಗೂ 6 ಮೀಟರ್ ಅಂತರವಿರಬೇಕು. ಮಾರಾಟ ಮಳಿಗೆಗೆ ನಿತ್ಯವೂ ಸ್ಯಾನಿಟೈಸ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಯ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಹಸಿರು ಪಟಾಕಿ ಪರಿಸರ ಸ್ನೇಹಿ ಪಟಾಕಿಯಾಗಿದೆ. ಇದರಿಂದ ಶಬ್ದ ಮಾಲಿನ್ಯ ವಾಯು ಮಾಲಿನ್ಯ ಯಾವುದೇ ಪರಿಸರಕ್ಕೆ ಹಾನಿಯಾಗದ ಇರುವ ಕಾರಣದಿಂದ ಈ ಪಟಾಕಿ ಅತ್ಯಂತ ಸುರಕ್ಷಿತ ಮತ್ತು ಪರಿಸರಸ್ನೇಹಿ ಪಟಾಕಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...