Friday, April 3, 2026
Friday, April 3, 2026

ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅನುಮತಿ

Date:

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಆಚರಣೆ ಸಂಬಂಧ, ಕರ್ನಾಟಕ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೀಪಾವಳಿಯ ವೇಳೆ ಹಸಿರು ಪಟಾಕಿ ಗೆ ಮಾತ್ರ ಅವಕಾಶವಿದ್ದು, ಉಳಿದ ಇತರೆ ಸಿಡಿಮದ್ದುಗಳ ಮಾರಾಟಕ್ಕೆ ಅವಕಾಶವಿಲ್ಲ. ಹಸಿರು ಪಟಾಕಿಯ ಮಾರಾಟಕ್ಕೆ ದಿನಾಂಕವನ್ನು ನಿಗದಿಗೊಳಿಸಲಾಗಿದೆ. ನವೆಂಬರ್ 1ರಿಂದ 10ರವರೆಗೆ ಪಟಾಕಿ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅಧಿಕೃತ ಪರವನಾಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಲು ಅವಕಾಶ ಇದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪಟಾಕಿಗಳನ್ನು ಸಾರ್ವಜನಿಕ ವಸತಿ ಸ್ಥಳದಿಂದ ದೂರವಿರುವ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಬೇಕು. ಮಳೆಗೆ ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹಾಗೂ ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುತ್ತಿರಬೇಕು. ಒಂದು ಮಾರಾಟ ಮಳಿಗೆಗೂ ಹಾಗೂ ಇನ್ನೊಂದು ಮಾರಾಟ ಮಳಿಗೆಗೂ 6 ಮೀಟರ್ ಅಂತರವಿರಬೇಕು. ಮಾರಾಟ ಮಳಿಗೆಗೆ ನಿತ್ಯವೂ ಸ್ಯಾನಿಟೈಸ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಯ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಹಸಿರು ಪಟಾಕಿ ಪರಿಸರ ಸ್ನೇಹಿ ಪಟಾಕಿಯಾಗಿದೆ. ಇದರಿಂದ ಶಬ್ದ ಮಾಲಿನ್ಯ ವಾಯು ಮಾಲಿನ್ಯ ಯಾವುದೇ ಪರಿಸರಕ್ಕೆ ಹಾನಿಯಾಗದ ಇರುವ ಕಾರಣದಿಂದ ಈ ಪಟಾಕಿ ಅತ್ಯಂತ ಸುರಕ್ಷಿತ ಮತ್ತು ಪರಿಸರಸ್ನೇಹಿ ಪಟಾಕಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...