Wednesday, July 8, 2026
Wednesday, July 8, 2026

ದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆ ಪ್ರವೇಶಕ್ಕೆ ಕಠಿಣ ನಿಯಮ

Date:

ಈ ಬಾರಿಯ 75ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಹಾಗೂ ಇತರೇ ಉಗ್ರ ಸಂಘಟನೆಗಳಿಂದ ಭಯೋತ್ಪಾದನಾ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರೀಯ ಗುಪ್ತಚರ ಇಲಾಖೆ (ಐಬಿ) ಎಚ್ಚರಿಸಿದೆ.

ರೋಹಿಂಗ್ಯಾ, ಅಫ್ಘಾನಿಸ್ತಾನ ಹಾಗೂ ಸುಡಾನ್ ದೇಶದ ಹೆಚ್ಚಿನ ಜನರು ವಾಸಿಸುವ ದೆಹಲಿಯಲ್ಲಿ ಹದ್ದಿನಕಣ್ಣು ಇಡುವಂತೆ ಹಾಗೂ ಟಿಫಿನ್ ಬಾಂಬ್, ಸ್ಟಿಕ್ಕಿ ಬಾಂಬ್ ಮತ್ತು ವಿವಿಐಡಿ ಬೆದರಿಕೆಯನ್ನು ಎದುರಿಸಲು ಜಾಗರೂಕರಾಗಿರುವಂತೆ ಹೇಳಿದೆ.

ಲಷ್ಷರ್, ಜೆಇಎಂ ಮತ್ತು ಇತರೆ ಕೆಲವು ಭಯೋತ್ಪಾದನಾ ಸಂಘಟನೆಗಳಿಂದ ದಾಳಿಯ ಅಪಾಯವಿರುವ ಬಗ್ಗೆ ಐಬಿ 10 ಪುಟಗಳ ವರದಿ ನೀಡಿದೆ.

ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಮೇಲಿನ ದಾಳಿ, ಉದಯಪುರ ಹತ್ಯೆ ಹಾಗೂ ಅಮರಾವತಿಗಳಲ್ಲಿ ನಡೆದ ಘಟನೆಗಳನ್ನೂ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಕೆಂಪುಕೋಟೆಗೆ ಪ್ರವೇಶಿಸಲು ಕಠಿಣ ನಿಯಮಗಳನ್ನು ಜಾರಿಗೊಳಿಸುವಂತೆ ಅದು ದೆಹಲಿ ಪೊಲೀಸರಿಗೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...