Friday, May 22, 2026
Friday, May 22, 2026

ಪ್ರಗತಿಯ ಹಾದಿಯಲ್ಲಿ ಸಿಟಿ ಕೋ-ಆಪರೇಟಿವ್ ಬ್ಯಾಂಕ್

Date:

ಕರ್ನಾಟಕ ರಾಜ್ಯದ ಸಹಕಾರಿ ಕ್ಷೇತ್ರಕ್ಕೆ ಮಲೆನಾಡಿನ ಕೇಂದ್ರವಾದ ಸಿಹಿಮೊಗೆ ಕೊಡುಗೆ ಅಪಾರ, ಪ್ರಕೃತಿದತ್ತವಾದ ಈ ಸುಂದರ ನಗರಿಯಲ್ಲಿ 1912ರಲ್ಲಿ ಸಮಾನ ಮನಸ್ಸಿನ ಸಹಕಾರಿ ದಿಗ್ಗಜರಲ್ಲಿ ಮೇಳೆಯಿಸಿ ಎಸ್‌.ಆರ್. ಬಾಲಕೃಷ್ಣರಾವ್‌, ಇವರ ಅಧ್ಯಕ್ಷತೆಯಲ್ಲಿ ಹುಟ್ಟುಹಾಕಿದ ಸಹಕಾರಿ ಸಂಸ್ಥೆ ಈ ನಮ್ಮ ಹೆಮ್ಮೆಯ “ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿ.,

ಈ ಸಹಕಾರಿ ಸೌಧಕ್ಕೆ ಕಳಸಪ್ರಾಯವಾಗಿ 1974ರಲ್ಲಿ ನಗರದ ಹೃದಯಭಾಗವಾದ ನೆಹರು ರಸ್ತೆಯ ಶಿವಪ್ಪನಾಯಕ ಮಾರುಕಟ್ಟೆಯಲ್ಲಿ ಈ ಬ್ಯಾಂಕಿನ ಶಾಖೆಯನ್ನು ತೆರೆಯಲಾಯಿತು. ಈ ಶಾಖೆಯು ಇಂದು ಬೃಹದಾಕಾರವಾಗಿ ಬೆಳೆದು ಸರ್ವಜನಾಂಗದವರ ಆರ್ಥಿಕ ತೊಂದರೆಗಳನ್ನು ನೀಗಿಸುವಲ್ಲಿ ಗಣನೀಯ ಪಾತ್ರ ವಹಿಸಿದೆ.

ಈ ಬ್ಯಾಂಕು 25 ವರ್ಗಕ್ಕೆ ಬೆಳ್ಳಿ ಹಬ್ಬ, 50 ವರ್ಷಕ್ಕೆ ಗಟ್ಟಿ‌ ಹಾಲಿ, 60 ವರ್ಷಕ್ಕೆ ಮೈಮುಟ್

ಜ್ಯುಬಿಲಿ, 75 ವರ್ಷಕ್ಕೆ ಪ್ಲಾಟಿನಂ ಜ್ಯುಬಿಲಿ ಆಚರಿಸಿಕೊಂಡು ದಿನಾಂಕ 05-03-2012 ಕ್ಕೆ ತನ್ನ 100

ವರ್ಷ ಪೂರೈಸಿ ಶತಮಾನೋತ್ಸವದ ಕಾರ್ಯಕ್ರಮವನ್ನು ದಿನಾಂಕ:01-09-2014 ರಲ್ಲಿ ಸಹಕಾರಿ

ಧುರೀಣರಾಗಿದ್ದ ಎಸ್.ಕೆ. ಮರಿಯಪ್ಪನವರ ಅಧ್ಯಕ್ಷತೆಯಲ್ಲಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.
ಯಡಿಯೂರಪ್ಪನವರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಬ್ಯಾಂಕಿನ ಶಾಖಾ ಕಛೇರಿಯು ಶಿವಮೊಗ್ಗ ನಗರದ ಅಮೀರ್ ಅಹ್ಮದ್‌ ಸರ್ಕಲ್‌ನಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿದ್ದು, ಶಾಖಾ ಕಛೇರಿಗೆಂದು ಸ್ವಂತ ಕಟ್ಟಡ ಹೊಂದುವ ಸಲುವಾಗಿ ಶಿವಮೊಗ್ಗ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಿವೇಶನವನ್ನು ಖರೀದಿಸಲಾಗಿರುತ್ತದೆ. ನಿವೇಶನದಲ್ಲಿ ಶಾಖಾ ಕಛೇರಿಗೆಂದು ಕಟ್ಟಡ ಕಟ್ಟಲು ಮಹಾನಗರ ಪಾಲಿಕೆ ವತಿಯಿಂದ ಪರವಾನಿಗೆ ಬಂದಿರುತ್ತದೆ.

ಪ್ರಸ್ತುತ ಶ್ರೀಯುತ ಎಂ.ಉಮಾಶಂಕರ ಉಪಾಧ್ಯರವರ ಅಧ್ಯಕ್ಷತೆಯಲ್ಲಿ ಬ್ಯಾಂಕಿನ ಎನ್.ಪಿ.ಎ ಶೇ.6% ಗೆ ತರಲಾಗಿರುತ್ತದೆ. ಈ ಬಾರಿಯೂ ಬ್ಯಾಂಕ್ ರೂ.85 ಲಕ್ಷ ಲಾಭ ಗಳಿಸಿದ್ದು, 2010 ರಿಂದ ಡಿವಿಡೆಂಟ್ ಶೇ.10% ಘೋಷಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಗೋರಕ್ಷಕ ಸಂತ ಕಬೀರಾನಂದ ಸ್ವಾಮೀಜಿ. ಲೇ: ಪ್ರಸಾದ ಶ್ರೀವತ್ಸ. ದಾವಣಗೆರೆ

´               ಗೋ ರಕ್ಷಕ ಸಂತ - ಸದ್ಗುರು ಶ್ರೀ ಶ್ರೀ ಶ್ರೀ...

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...