Monday, December 15, 2025
Monday, December 15, 2025

ರಾಜ್ಯದ 11 ಇಲಾಖೆಗಳ ನಿರ್ದಿಷ್ಟ ಹುದ್ದೆಗಳ ವೇತನ ಪರಿಷ್ಕರಣೆ

Date:

ಕರ್ನಾಟಕದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ.

ಆಗಸ್ಟ್6ರಂದು ಶನಿವಾರ ಅತ್ಯಧಿಕ ಭಾರಿ ಮಳೆ ಆಗುವ ಕಾರಣಕ್ಕೆ ಐದು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 6ರಂದು ಕರ್ನಾಟಕ ಕರಾವಳಿಯ ಮತ್ತು ಮಲೆನಾಡಿನ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅಂದು ಈ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ನಿರಂತರವಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಲ್ಲಿ ಒಂದು ದಿನ ಸುಮಾರು 20ಸೆಂ.ಮೀ.ಗಿತಂಲೂ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನೂ ಇದೇ ಮೂರು ದಿನದ ಅವಧಿಯಲ್ಲಿ ಬೀದರ್, ಬೆಳಗಾವಿ, ಹಾವೇರಿ, ಗದಗ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಆಗಾಗ ಸಾಧಾರಣದಿಂದ ಭಾರಿ ಮಳೆ ಬೀಳುವ ಸಂಭವವಿದೆ.

ರಾಜ್ಯದಲ್ಲಿ ಆಗಸ್ಟ್ 07ರವರೆಗೆ ಅತೀ ಭಾರಿ ಮಳೆ ಮುಂದುವರಿಯಲಿದೆ. ಈ ಮೂರು ದಿನ ಕರವಳಿ ಜಿಲ್ಲೆಗಳೂ ಒಳಗೊಂಡಂತೆ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಒಂದು ದಿನ ಹಾಗೂ ಚಿಕ್ಕಮಗಳೂರು, ಕೊಡಗು, ಮಡಿಕೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಎರಡು ದಿನ ‘ಆರೆಂಜ್‌ ಅಲರ್ಟ್’ ಕೊಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...