Tuesday, August 25, 2026
Tuesday, August 25, 2026

10 ವರ್ಷಗಳಿಂದಿರುವ ಕೈದಿಗಳನ್ನ ಬಿಡುಗಡೆಮಾಡಲು ಕ್ರಮ ಕೈಗೊಳ್ಳಿ-ಸುಪ್ರೀಂ ಸೂಚನೆ

Date:

ಕಳೆದ 10 ವರ್ಷಗಳಿಂದ ಜೈಲಿನಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತುರ್ತಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಎಸ್‌.ಕೆ.ಕೌಲ್‌ ಮತ್ತು ಎಂ.ಎಂ.ಸುಂದರೇಶ್‌ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ, ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ನಿತ್ರಾಣಗೊಂಡಿರುವ ಕೈದಿಗಳನ್ನು ಜಾಮೀನು ಆಧಾರದಲ್ಲಿ ಬಿಡುಗಡೆ ಮಾಡಬೇಕು.

14 ವರ್ಷಗಳ ಕಾಲ ಜೈಲಿನಲ್ಲಿರುವ ಕೈದಿಗಳ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸಬೇಕು ಎಂದು ತಿಳಿಸಿದೆ. ಸಾಧ್ಯವಾದರೆ ಶಿಕ್ಷೆ ಕಡಿತಕ್ಕೆ ಏಕರೂಪ ನೀತಿಯನ್ನು ಜಾರಿ ಮಾಡಬಹುದು ಎಂದು ಸಲಹೆ ನೀಡಿದೆ.

ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರುವ ಕೈದಿಗಳನ್ನು 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಾದರೂ ಬಿಡುಗಡೆ ಮಾಡಲು ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...