Sunday, December 7, 2025
Sunday, December 7, 2025

ಕನ್ನಡದ ಸ್ಥಾನ ಅನನ್ಯ ಮತ್ತು ವಿಶ್ವಮಾನ್ಯ : ಸಚಿವ ಕೆ.ಎಸ್. ಈಶ್ವರಪ್ಪ

Date:

ಶಿವಮೊಗ್ಗದ ಡಿ.ಎ.ಆರ್ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನವರು ಕನ್ನಡ ಧ್ವಜಾರೋಹಣ ನೆರವೇರಿಸಿದರು.”ನವೆಂಬರ್ ತಿಂಗಳು ಬಂತೆಂದರೆ ಕನ್ನಡ ನಾಡಿನಾದ್ಯಂತ ಎಲ್ಲರ ಮನೆ ಮನಗಳಲ್ಲಿ ಸಂಭ್ರಮ ಪುಟಿದೇಳುತ್ತದೆ. ವಿಶ್ವದೆಲ್ಲೆಡೆ ಪಸರಿಸಿರುವ ಕನ್ನಡಿಗರು ಇಂದು ಸಂಭ್ರಮದಿಂದ ಕನ್ನಡದ ಹಬ್ಬವನ್ನು ಆಚರಿಸುತ್ತಿದ್ದಾರೆ. ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ, ಇಲ್ಲಿನ ಆಚರಣೆ ಎಲ್ಲವೂ ಅನನ್ಯವಾಗಿದ್ದು ವಿಶ್ವಮಾನ್ಯವಾಗಿದೆ” ಎಂದರು.


ಕನ್ನಡನಾಡು ವಿವಿಧ ಧರ್ಮ ಸಂಸ್ಕೃತಿ ಗಳ ಸಮಾಗಮವಾಗಿದೆ. ಮೌರ್ಯರು, ಕದಂಬರು, ಗಂಗರು, ಹೊಯ್ಸಳರು, ವಿಜಯನಗರದ ಅರಸರು, ಚಾಲುಕ್ಯರು, ರಾಷ್ಟ್ರಕೂಟರು, ಮೈಸೂರಿನ ಒಡೆಯರು, ಕೊಡವರು ಮುಂತಾದ ಅನೇಕ ರಾಜ ಮನೆತನಗಳು ಈ ನಾಡಿಗೆ ನೀಡಿದ ಕೊಡುಗೆ ಅಪಾರವಾಗಿದೆ. ದಾಸಶ್ರೇಷ್ಠ ಕನಕದಾಸರು, ಪುರಂದರದಾಸರು, ಸರ್ವಜ್ಞ, ಶಿಶುನಾಳ ಷರೀಫ ಅವರಂಥ ಸಂತಕವಿಗಳು, ಸಾಮಾಜಿಕ ಕ್ರಾಂತಿಯ ಹರಿಕಾರರಾದ ಜಗಜ್ಯೋತಿ ಬಸವಣ್ಣನವರಂಥ ವಚನಕಾರರು ಮತ್ತು ಹಲವಾರು ದಾರ್ಶನಿಕರು ಬಾಳಿ ಬದುಕಿದ ನೆಲ ಹೆಮ್ಮೆಯ ಕನ್ನಡ ನಾಡು.
ಧರ್ಮ ಸಹಿಷ್ಣತೆ, ಸಮನ್ವಯತೆ, ಸೌಹಾರ್ದತೆಯಿಂದ ಬದುಕುತ್ತಿರುವ ನಾಡು ನಮ್ಮದು. ಕನ್ನಡ ಭಾಷೆ ಅತ್ಯಂತ ಶ್ರೀಮಂತ ಸಾಹಿತ್ಯ ಹೊಂದಿದ್ದು, ಕನ್ನಡದ 8 ಜನ ಸಾಹಿತ್ಯ ಪರಿಚಾರಕರು, ಸಾಹಿತ್ಯದ ಅತ್ಯುನ್ನತ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
     ಈ ವರ್ಷ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರ್ಣಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಈ ಅಮೃತ ಮಹೋತ್ಸವವನ್ನು ದೇಶಾದ್ಯಂತ ಒಂದು ವರ್ಷ ಕಾಲ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ವಿವಿಧ ಜನಪರ, ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರೂ ಕೂಡ ಇದಕ್ಕೆ  ಕೈಜೋಡಿಸಿರುವುದು ರಾಷ್ಟ್ರಪ್ರೇಮ ಮತ್ತು ಕಲ್ಯಾಣದ ದ್ಯೋತಕವಾಗಿದೆ.
   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮರ್ಥ ನಾಯಕತ್ವದಲ್ಲಿ ನಮ್ಮ ರಾಜ್ಯ ಅಭಿವೃದ್ಧಿಯ ಹೊಸ ಮನ್ವಂತರಕ್ಕೆ ತೆರೆದುಕೊಳ್ಳುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದು. ಸುಶಿಕ್ಷಿತ, ಸುಸಂಸ್ಕೃತ ಸಮಾಜವನ್ನು ಕಟ್ಟಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಸ್ವಾತಂತ್ರ್ಯದ ಅಮೃತೋತ್ಸವದ ಸವಿನೆನಪಿಗೆ ರಾಜ್ಯದ ಪ್ರತಿ ತಾಲೂಕಿನಲ್ಲಿ ಅಮೃತ ಗ್ರಾಮ ಪಂಚಾಯತ್ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಜಿಲ್ಲೆಯ 32  ಗ್ರಾಮ ಪಂಚಾಯತ್‍ಗಳನ್ನು ಆಯ್ಕೆ ಮಾಡಲಾಗಿದ್ದು, ಮೂಲಸೌಲಭ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಜಿಲ್ಲಾ ಪಂಚಾಯತ ಸಿಇಒ ವೈಶಾಲಿ , ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...