Thursday, July 9, 2026
Thursday, July 9, 2026

ಕರುಣೆ ತೋರೋ ಮಳೆರಾಯ ಮೊರೆಯಿಟ್ಟಿದೆ ಕರುನಾಡು

Date:

ಮಳೆ ನಿಂತರೆ ಸಾಕು ಅನ್ನೋ ಮಾತುಗಳು ಎಲ್ಲರ ಬಾಯಲ್ಲಿ ಕೇಳುತ್ತಿದ್ದೇವೆ. ದಕ್ಷಿಣ, ಉತ್ತರ ಒಳನಾಡು ಸೇರಿದಂತೆ ಎಲ್ಲಾ ಭಾಗಗಳಲ್ಲಿ ಕಳೆದ 3 ವಾರಗಳಿಂದ ನಿರಂತರ ಮಳೆ ಆಗುತ್ತಿದೆ. ತೊಳೆದು ಹಾಕಿರೋ ಬಟ್ಟೆ ಒಣಗುತ್ತಿಲ್ಲ.

ಸೂರ್ಯದೇವ ಕೃಪೆ ತೋರಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ತಿದ್ದಾರೆ. ಇಂದಿನಿಂದ ಮೂರು ದಿನ ರಾಜ್ಯದ 10 ಜಿಲ್ಲೆಗಳಲ್ಲಿ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ನಿರಂತರ ಮಳೆಯಿಂದಾಗಿ ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿವೆ. ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ವರದಿಗಳು ರಾಜ್ಯದ ಮೂಲೆ ಮೂಲೆಯಿಂದಲೂ ಬರುತ್ತಿವೆ. ಕೆಲವಡೆ ಪ್ರಾಣಹಾನಿ ಸಹ ಸಂಭವಿಸಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಸಹ ಮೋಡ ಕವಿದ ವಾತಾವರಣ ಇರಲಿದೆ. ಜಡಿ ಮಳೆಯಾಗಲಿದೆ. ಆದ್ದರಿಂದ, ಮನೆಯಿಂದ ಹೊರ ಹೋಗುವ ಮುನ್ನ ಮಳೆಯಿಂದ ರಕ್ಷಣೆ ಪಡೆದುಕೊಳ್ಳಲು ಕೊಡೆ ಅಥವಾ ರೇನ್ ಕೋಟ್ ತೆಗೆದುಕೊಂಡು ಹೋಗುವುದನ್ನು ಮರೆಯಬೇಡಿ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 26 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನೂ ಮಳೆಯ ಜೊತೆಯಲ್ಲಿ ಚಳಿ ಸಹ ಏರಿಕೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...