Tuesday, March 24, 2026
Tuesday, March 24, 2026

ಕಾರ್ಮಿಕರ ಕೆಲಸದ ಸ್ಥಳದಲ್ಲಿ ಸಂಚಾರಿ ವೈದ್ಯಕೀಯ ಘಟಕ ಸೌಲಭ್ಯ

Date:

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳ ನಿಯಮಗಳಿಗೆ ಸರ್ಕಾರ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದೆ.

ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಸಂಚಾರಿ ವೈದ್ಯಕೀಯ ಘಟಕ ಸ್ಥಾಪನೆ, ಅವಶ್ಯವಿರುವಾಗ ಪೌಷ್ಟಿಕ ಆಹಾರ ಕಿಟ್ ವಿತರಿಸಲಾಗುವುದು.
ಹೆರಿಗೆ ಸೌಲಭ್ಯ ಸಹಾಯಧನವನ್ನು 50,000 ರೂ.ಗೆ ಹೆಚ್ಚಳ ಮಾಡಲಾಗಿದೆ.

ಅಂತಿಮ ಸಂಸ್ಕಾರ ವೆಚ್ಚ ಸೌಲಭ್ಯ ಸಹಾಯಧನವನ್ನು 50 ಸಾವಿರ ರೂ.ನಿಂದ 71,000 ರೂ.ಗೆ ಹೆಚ್ಚಳ ಮಾಡಲಾಗಿದೆ.
ಕೋವಿಡ್ ನಿಂದ ಫಲಾನುಭವಿ ಮೃತಪಟ್ಟಲ್ಲಿ ಅವಲಂಬಿತರಿಗೆ 2 ಲಕ್ಷ ರೂ. ಸಹಾಯಧನ ನೀಡಲಾಗುವುದು.
ಸಾರಿಗೆ ಸೌಲಭ್ಯದಡಿ ಫಲಾನುಭವಿಗಳಿಗೆ ರಾಜ್ಯಾದ್ಯಂತ ಕೆಎಸ್‌ಆರ್ಟಿಸಿ ಬಸ್ ಪಾಸ್ ನೀಡಲಾಗುವುದು.

ಗೃಹಭಾಗ್ಯ ಸೌಲಭ್ಯದಡಿ 21 ರಿಂದ 50 ವರ್ಷದ ನೋಂದಾಯಿತ ಫಲಾನುಭವಿಗಳಿಗೆ ಮನೆ ನಿರ್ಮಿಸಲು 10 ಕಂತುಗಳಲ್ಲಿ ಸಾಲ ನೀಡಲು ನಿಯಮ ಸರಳಿಕರಣ ಮಾಡಲಾಗಿದೆ.

ಪಿಂಚಣಿ ಸೌಲಭ್ಯವನ್ನು 2000 ರೂ.ನಿಂದ 3000 ರೂ.ಗೆ ಏರಿಕೆ ಮಾಡಲಾಗಿದೆ.
ಫಲಾನುಭವಿಗಳ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತರಬೇತಿ, ಕಲಿಕಾ ಕಿಟ್, ಕಂಪ್ಯೂಟರ್, ಲ್ಯಾಪ್ಟಾಪ್ ಲ್ಯಾಬ್ ವಿತರಿಸಲಾಗುವುದು.
ವೈದ್ಯಕೀಯ ಸೌಲಭ್ಯ ಯೋಜನೆಯಡಿ ಸಹಾಯಧನವನ್ನು 10 ಸಾವಿರ ರೂ.ನಿಂದ 20 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.

ಫಲಾನುಭವಿಗಳು ಕೆಲಸದ ಸ್ಥಳದಲ್ಲಿ ಅಪಘಾತದಿಂದ ಮೃತಪಟ್ಟರೆ ಅವಲಂಬಿತರಿಗೆ ಪರಿಹಾರದ ಮೊತ್ತವನ್ನು 2 ಲಕ್ಷದಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ.
ಮದುವೆ ಸಹಾಯಧನ ಮೊತ್ತವನ್ನು 50 ರಿಂದ 60,000 ರೂ.ಗೆ ಹೆಚ್ಚಳ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...