Friday, May 8, 2026
Friday, May 8, 2026

ಉದ್ಯೋಗ ಖಾತರಿ ಯೋಜನೆಗೆ ₹15000 ಹೆಚ್ಚುವರಿ ನೀಡಲು ಚಿಂತನೆ

Date:

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಜಿಎಸ್‌)ಗೆ ಹೆಚ್ಚುವರಿಯಾಗಿ 15 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.
ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆಯಿಂದ ಹೆಚ್ಚುವರಿಯಾಗಿ ಶೇ.20 ಮೊತ್ತ ನೀಡಬೇಕು ಎಂದು ಕೋರಿಕೆ ಸಲ್ಲಿಕೆಯಾಗಿದ್ದು, ಅದಕ್ಕೆ ಸಮ್ಮತಿ ನೀಡುವ ಸಾಧ್ಯತೆಗಳು ಅಧಿಕವಾಗಿವೆ.
ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ಹಲವು ಸರ್ಕಾರಗಳಿಂದಲೂ ಕೂಡ ಹೆಚ್ಚುವರಿ ಮೊತ್ತ ನೀಡುವ ಬಗ್ಗೆ ಒತ್ತಡಗಳು ಹೆಚ್ಚುತ್ತಿವೆ.
ರಾಜ್ಯಗಳು 5,517.87 ಕೋಟಿ ರೂ. ಮೊತ್ತವನ್ನು ಪಾವತಿ ಮಾಡಲು ರಾಜ್ಯಗಳು ಬಾಕಿ ಉಳಿಸಿಕೊಂಡಿವೆ. ಕರ್ನಾಟಕ 462.78 ಕೋಟಿ ರೂ., ಪಶ್ಚಿಮ ಬಂಗಾಳ 2,636.71 ಕೋಟಿ ರೂ., ಬಿಹಾರ 1,160.77 ಕೋಟಿ ರೂ., ಉತ್ತರ ಪ್ರದೇಶ 661.42 ಕೋಟಿ ರೂ. ಪಾವತಿ ಮಾಡಲು ಇದೆ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.
ಪ್ರಸಕ್ತ ವರ್ಷದ ಮುಂಗಡ ಪತ್ರದಲ್ಲಿ ಎಂಜಿಎನ್‌ಆರ್‌ಇಜಿಎಸ್‌ಗೆ 73 ಸಾವಿರ ಕೋಟಿ ರೂ. ಮೀಸಲಾಗಿ ಇರಿಸಲಾಗಿತ್ತು. ನಂತರ ಈ ಮೊತ್ತವನ್ನು 98 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿತ್ತು. ಈ ಪೈಕಿ 37,500 ಕೋಟಿ ರೂ. ಮೊತ್ತವನ್ನು ರಾಜ್ಯಗಳಿಗೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...