Thursday, April 30, 2026
Thursday, April 30, 2026

ಅಮೃತ ಮಹೋತ್ಸವ ನಿಮಿತ್ತ ಎಲ್ಲರ ಮನೆಯ ಮೇಲೂ ರಾಷ್ಟ್ರಧ್ವಜ ಹೆಮ್ಮೆಯ ಸಂಗತಿ-ಶ್ರೀರಂಜಿನಿ ದತ್ತಾತ್ರಿ

Date:

ಅಮೃತ ಭಾರತ ಸಂಭ್ರಮಾಚರಣೆಯ ಪ್ರಯುಕ್ತ ಬಸವನಗಂಗೂರು ಸ.ಹಿ.ಪ್ರಾ.ಶಾಲೆ, ಬಸವನಗಂಗೂರು ಗ್ರಾಮ, ಅಬ್ಬಲಗೆರೆ ಗ್ರಾಮ ಪಂಚಾಯತಿ ಹಾಗೂ ಮನ್ವಂತರ ಮಹಿಳಾಮಂಡಳದ ಸಹಯೋಗದಲ್ಲಿ ಹರ್ ಘರ್ ಮೆ ತಿರಂಗಾ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು..

ಸ್ವಾತಂತ್ರ್ಯ ಭಾರತಕ್ಕಾಗಿ ನಮ್ಮ ದೇಶಭಕ್ತರು, ಯೋಧರು, ರಾಷ್ಟ್ರ ಭಕ್ತರು ನೀಡಿದ ಅಮೂಲ್ಯ ಬಲಿದಾನ ಕೊಡುಗೆಯ ಬಗ್ಗೆ ಶ್ರೀರಂಜಿನಿ ದತ್ತಾತ್ರಿಯವರು ಮಾಹಿತಿ ನೀಡಿದರು.
ತಿರಂಗಾಧ್ವಜ ಅಮೃತಾ ಭಾರತದ ನಿಮಿತ್ತ ಈ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಈ ದೇಶದ ಸಮಸ್ತ ಪ್ರಜೆಗಳಿಗೂ ಅವರವರ ಮನೆಯ ಮೇಲೆ ತಿರಂಗಾಧ್ವಜವನ್ನು ಹಾರಿಸಲು ಅನುಮತಿ ನೀಡಿದ ಒಂದು ಸುವರ್ಣ ಅವಕಾಶ. ಸ್ವತಂತ್ರ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಇತ್ಯಾದಿ ವಿಶೇಷ ದಿನಗಳಲ್ಲಿ ನಿರ್ದಿಷ್ಟ ಸ್ಥಳಗಳನ್ನು ಹೊರತುಪಡಿಸಿ ಎಲ್ಲಿಯೂ ತ್ರಿವರ್ಣ ಧ್ವಜದ ಹಾರಾಟಕ್ಕೆ ಅನುಮತಿ ಇರುವುದಿಲ್ಲ. ಆದರೆ ಅಮೃತ ಭಾರತದ ನಿಮಿತ್ತ ಭಾರತದ ಪ್ರತಿಯೊಬ್ಬ ಭಾರತೀಯನೂ ತನ್ನ ಮನೆಯ ಮೇಲೆ ತ್ರಿವರ್ಣದ ಧ್ವಜ ಹಾರಿಸುವ ಸದವಕಾಶ ಭಾರತ ಸರ್ಕಾರ ನೀಡಿದೆ ಇದನ್ನು ನಾವು ಸಮ್ಮಾನದಿಂದ ಸ್ವೀಕರಿಸಿ ಧ್ವಜಕ್ಜೆ ವಂದನೆ ಸಲ್ಲಿಸಿ ನಮ್ಮ ರಾಷ್ಟ್ರ ಧ್ವಜವನ್ನ ಮುಗಿಲೆತ್ತರಕ್ಕೆ ಹಾರಿಸೋಣ ಎಂದು ನುಡಿದರು.

ಬಸವನ ಗಂಗೂರು ಗ್ರಾಮ ಅಬ್ಬಲಗೆರೆ ಗ್ರಾ.ಪಂ. ಅಧ್ಯಕ್ಷರಾದ ಬಸಮ್ಮನವರು,ಆಶಾ ಕಾರ್ಯಕರ್ತೆ, ಗ್ರಾ.ಪಂ ಸದಸ್ಯರಿಗೆ , ಶಾಲಾ ಮುಖ್ಯೋಪಾಧ್ಯಾಯರಿಗೆ ಗೌರವ ಸಮರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಸಮ್ಮ, ಸದಸ್ಯರಾದ ದೇವಮ್ಮ , ವಿಜಯ್ ಕುಮಾರ್, ರಾಜಶೇಖರ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ನಟರಾಜ್, ಸದಸ್ಯರಾದ ರೋಜಾ, ವಿಜಯ್ ಕುಮಾರ್ ಸಂತೋಷ್ , ಉಷಾ.
ಶಾಲೆಯ ಮುಖೋಪಾಧ್ಯಾಯರಾದ ವಿದ್ಯಾಆಣ್ಣಪ್ಪ , ಶಿಕ್ಷಕರಾದ ಸವಿತಾ, ರುದ್ರಮೂರ್ತಿ, ಮಾರುತಿ ನಾಯಕ್ ರವರು ಉಪಸ್ಥಿತರಿದ್ದರು.
ಮನ್ವಂತರದ ಮಹಿಳಾ ಮಂಡಳದ ಅಧ್ಯಕ್ಷ ಶ್ರೀರಂಜಿನಿ ದತ್ತಾತ್ರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...