Thursday, August 13, 2026
Thursday, August 13, 2026

ಅಂಗಾಂಗ ದಾನ‌ವೆಂದರೆ ಸಾವಿನ ನಂತರದಸಮಾಜ ಸೇವೆ- ಬೊಮ್ಮಾಯಿ

Date:

ಅಂಗಾಂಗ ದಾನ ಮಾನವೀಯತೆಯ ಕೆಲಸ. ಅಂಗಾಂಗಗಳನ್ನು ದಾನಕ್ಕೆ ಸಂಕಲ್ಪ ಮಾಡುವ ಮುಖಾಂತರ ಸಾವಿನ ನಂತರವೂ ಬದುಕು ನೀಡುವ ಸಾರ್ಥಕ ಕಾರ್ಯ ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧ ಮುಂಭಾಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಒಬ್ಬ ವ್ಯಕ್ತಿ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಎಂಟು ಜೀವಗಳನ್ನು ಉಳಿಸಬಹುದು. ಚರ್ಮದಿಂದ ಹಿಡಿದು ಎಲ್ಲ ಅಂಗಗಳನ್ನು ದಾನ ಮಾಡಬಹುದು. ಸ್ವಾಮಿ ವಿವೇಕಾನಂದರು ಹೇಳಿದಂತೆ ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವನು ಸಾಧಕ. ಮಾನವ ಜನ್ಮ ಶ್ರೇಷ್ಠವಾದುದು. ಅಂಗಾಂಗ ದಾನದ ಮೂಲಕ ಈ ಶ್ರೇಷ್ಠ ಜೀವವನ್ನು ಉಳಿಸಿದಂತಾಗುತ್ತದೆ ಎಂದು ತಿಳಿಸಿದರು.

ವಿಜ್ಞಾನಿಗಳ, ವೈದ್ಯರ ಪರಿಶ್ರಮದಿಂದ ನಮ್ಮ ಸಾವಿನ ನಂತರ ಅಂಗಾಂಗಗಳನ್ನು ನೀಡುವ ಮೂಲಕ ಇತರರ ಜೀವವನ್ನು ಬದುಕಿಸಬಹುದಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರಸ್ತುತ 18 ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಿಮಾನ್ಸ್‌ನಲ್ಲಿ ಮೆದುಳು ದಾನ ಹಾಗೂ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಮೂತ್ರಪಿಂಡ ದಾನಗಳನ್ನು ಮಾಡಬಹುದಾಗಿದೆ. ಇದು ಸರ್ಕಾರದ ದೊಡ್ಡಸಾಧನೆ. ಅಂಗಾಂಗ ದಾನ ಮಾನವೀಯತೆ ಕೆಲಸ ಎಂದು ಹೇಳಿದರು.

ಬ್ರೈನ್‌ ಡೆಡ್‌ ವ್ಯಕ್ತಿಯ ಅಂಗಾಂಗ ದಾನದಿಂದ 8 ಮಂದಿ ಮರುಜೀವ ಪಡೆಯುವುದರ ಜತೆಗೆ ಮರಣಾನಂತರವೂ ಅಂಗಾಂಗಗಳು ಪ್ರಪಂಚ ನೋಡಲು ಸಾಧ್ಯವಾಗುತ್ತದೆ. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡಿದ್ದೇನೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಅಂಗಾಂಗ ದಾನ ಮಾಡಿದವರ ಕುಟುಂಬ ಸದಸ್ಯರನ್ನು ಸನ್ಮಾನಿಸಲಾಯಿತು. ಐದು ಸಾವಿರಕ್ಕೂ ಹೆಚ್ಚು ಮಂದಿ ಮೆಡಿಕಲ್ಸ್‌, ಪ್ಯಾರಾ ಮೆಡಿಕಲ್ಸ್‌ ನರ್ಸಿಂಗ್‌ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡರು.

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಪರಿಷತ್‌ ಹಂಗಾಮಿ ಸಭಾಪತಿ ರಘುನಾಥ್‌ ರಾವ್‌ ಮಲ್ಕಾಪುರೆ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...