Friday, February 6, 2026
Friday, February 6, 2026

ಅಮೃತ ಮಹೋತ್ಸವ ಬೊಮ್ಮಾಯಿ ಅವರಿಂದ ವಿಶೇಷ ಯೋಜನೆ ಘೋಷಣೆ

Date:

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಭಾರತ ದೇಶಕ್ಕೆ ಈಗ ಅಮೃತ ಗಳಿಗೆ ಬಂದಿದೆ. ಹಲವಾರು ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಸಹಸ್ರ ಸಂಖ್ಯೆಯ ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸುತ್ತೇವೆ. ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸುತ್ತೇವೆ. 8100 ಮಹಿಳೆಯರಿಗೂ ಇದರಿಂದ ಉದ್ಯೋಗವಕಾಶ ದೊರೆಯಲಿದೆ.

ಕರ್ತವ್ಯ ನಿರತ ಸೈನಿಕ ಮೃತಪಟ್ಟರೆ, ಆ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ, ₹ 25 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.

ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.
ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿ ಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಸೇರಿದಂತೆ ಇತರ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ. ಸಾಲದ ಸಹಾಯಧನ ಯೋಜನೆ ರೂಪಿಸಲಾಗಿದೆ ಎಂದರು.

ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತರ ವಿದ್ಯಾನಿಧಿ ಯೋಜನೆ ವಿಸ್ತರಿಸುತ್ತೇವೆ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...