Friday, May 1, 2026
Friday, May 1, 2026

ಭದ್ರಾವತಿಯಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

Date:

ನಿಷೇಧಾಜ್ಞೆ ನಡುವೆಯೂ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಮೂವರ ಗುಂಪೊಂದು ಚಾಕುವಿನಿಂದ ಇರಿಯಲು ಯತ್ನಿಸಿರುವ ಘಟನೆ ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೂದಲೆಳೆಯ ಅಂತರದಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್(28) ಪಾರಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಪೊಲೀಸರ ಹೈ ಅಲರ್ಟ್, ನಿಷೇಧಾಜ್ಞೆ ನಡುವೆಯೂ ಗುಂಪೊಂದು ಭದ್ರಾವತಿಯ ನೆಹರು ಬಡಾವಣೆಯಲ್ಲಿ ಗಲಾಟೆ ನಡೆಸಿದ್ದು, ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಸುನೀಲ್ ಎಂಬಾತನ ಮೇಲೆ ಡಿಚ್ಚಿ ಅಲಿಯಾಸ್ ಮುಬಾರಕ್ ಸೇರಿದಂತೆ ಮೂವರು ಮನಬಂದಂತೆ ಕೈಗಳಿಂದ ಮುಖ, ಕೈ ಹಾಗೂ ಇನ್ನಿತರ ಭಾಗಗಳಿಗೆ ಹಲ್ಲೆ ನಡೆಸಿ ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ.

ತಕ್ಷಣ ಸುನೀಲ್ ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದು, ಹಲ್ಲೆಯಿಂದ ಮುಖಕ್ಕೆ ಗಂಭೀರ ಪೆಟ್ಟಾಗಿದೆ. ಸುದ್ದಿ ತಿಳಿದು ಹಳೆನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...