Sunday, August 23, 2026
Sunday, August 23, 2026

ಸರ್ಕಾರದ ಯೋಜನೆ ಸೌಲಭ್ಯ ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯ

Date:

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೊರಡಿಸಿದ ಇತ್ತೀಚಿನ ಸುತ್ತೋಲೆಯಂತೆ ಇನ್ನು ಮುಂದೆ ನೀವು ಸರ್ಕಾರಿ ಸಬ್ಸಿಡಿಗಳು ಹಾಗೂ ಪ್ರಯೋಜನಗಳನ್ನು ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯವಾಗಿದೆ.

ಇಲ್ಲವೇ, ಆಧಾರ್‌ ದಾಖಲಾತಿ ಚೀಟಿಯಾದರೂ ಹೊಂದಿರಲೇಬೇಕು.

ಆಧಾರ್‌ ಸಂಖ್ಯೆ ಇಲ್ಲದಿದ್ದರೆ ಸರ್ಕಾರದ ಯಾವುದೇ ಸವಲತ್ತು ಹಾಗೂ ಸಬ್ಸಿಡಿಗಳು ನಿಮಗೆ ಸಿಗುವುದಿಲ್ಲ ಎಂದು ಸುತ್ತೋಲೆ ತಿಳಿಸಿದೆ.

ಯುಐಡಿಎಐ ಕಳೆದ ವಾರ ಎಲ್ಲಾ ಕೇಂದ್ರ ಸಚಿವಾಲಯಗಳು ಹಾಗೂ ರಾಜ್ಯ ಸರ್ಕಾರಗಳಿಗೆ ಈ ಸುತ್ತೋಲೆ ಹೊರಡಿಸಿದೆ.

ಆಧಾರ್ ಸಂಖ್ಯೆ ಹೊಂದಿಲ್ಲದೆ ಸರ್ಕಾರ ನೀಡುವ ಸಬ್ಸಿಡಿಗಳು ಮತ್ತು ಪ್ರಯೋಜನಗಳನ್ನು ಪಡೆಯುತ್ತಿರುವವರಿಗೆ ಆಧಾರ್ ನಿಯಮಗಳನ್ನು ಬಿಗಿಗೊಳಿಸಲು ಆಗಸ್ಟ್ 11 ರಂದು ಈ ಸುತ್ತೋಲೆಯನ್ನು ಹೊರಡಿಸಲಾಗಿದೆ ಎನ್ನಲಾಗಿದೆ. ಸರ್ಕಾರಿ ಯೋಜನೆಗಳ ಅಡಿಯಲ್ಲಿ ಬರುವ ಸವಲತ್ತುಗಳು, ಸಬ್ಸಿಡಿಗಳು ಹಾಗೂ ಸೇವೆಗಳನ್ನು ನೀಡಲು ಫಲಾನುಭವಿಗಳ ಅರ್ಹತೆಯನ್ನು ನಿರ್ಧರಿಸುವ ಸಲುವಾಗಿ ಈಗ ಆಧಾರ್ ಸಂಖ್ಯೆಯನ್ನು ಹೊಂದಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಅಲ್ಲದೆ ಸರ್ಕಾರದ ಪ್ರಮಾಣ ಪತ್ರಗಳನ್ನು ಬಯಸಿದರೂ ಕೂಡ ಆಧಾರ್‌ ಕಡ್ಡಾಯ ಎಂದು ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...