Friday, March 20, 2026
Friday, March 20, 2026

ನಗರದಲ್ಲಿ ಸಹಜ ಸ್ಥಿತಿ ಇದೆ. ವ್ಯಾಪಾರಿಗಳಿಗೆ ಅವಕಾಶಕೊಡಿ- ಗೋಪಿನಾಥ್

Date:

ಶಿವಮೊಗ್ಗ ನಗರದಲ್ಲಿ ಬುಧವಾರದಿಂದ ಸಂಜೆಯ ನಂತರ ವ್ಯಾಪಾರ – ವಹಿವಾಟಿಗೆ ಪೊಲೀಸರು ಅವಕಾಶ ನಿರಾಕರಿಸುತ್ತಿದ್ದು, ಇದರಿಂದ ವರ್ತಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ. ನಿಯಮಾನುಸಾರ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗೆ ಮನವಿ ಪತ್ರ ಅರ್ಪಿಸಿದೆ.

ಈ ಹಿನ್ನೆಲೆಯಲ್ಲಿ ನಗರದ ಡಿಸಿ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಲಾಯಿತು.

ಸಂಜೆಯ ನಂತರ ವ್ಯಾಪಾರ – ವಹಿವಾಟಿಗೆ ನಿರ್ಬಂಧ ಹಾಕುತ್ತಿರುವುದರಿಂದ ಉದ್ದಿಮೆದಾರರಿಗೆ ಅಪಾರ ನಷ್ಟ ಉಂಟಾಗುತ್ತಿದೆ. ಸದ್ಯ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಕಾನೂನು-ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಈ ಹಿನ್ನಲೆಯಲ್ಲಿ ಸಂಜೆಯ ನಂತರವೂ ವ್ಯಾಪಾರ ವಹಿವಾಟಿಗೆ ನಿಯಮಾನಸಾರ ಅವಕಾಶ ನೀಡಬೇಕು ಎಂದು ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...