Friday, June 19, 2026
Friday, June 19, 2026

ಸಂಸ್ಕೃತ ಗ್ರಾಮದ ಬಗ್ಗೆ ಮೆಚ್ಚಿದ ಎಡಿಜಿಪಿ ಅಲೋಕ್ ಕುಮಾರ್

Date:

ಸಾರ್ವಕರ್ ಫ್ಲೆಕ್ಸ್​ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾಗಿದ್ದ ಪರಿಸ್ಥಿತಿಯಿಂದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು.

ಈ ವೇಳೆ, ಸಂಸ್ಕೃತ ಗ್ರಾಮ ಮತ್ತೂರಿಗೂ ಭೇಟಿ, ಇಲ್ಲಿನ ಗ್ರಾಮಸ್ಥರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದಾರೆ. ಆ ವಿಡಿಯೋವನ್ನು ಅಲೋಕ್ ಕುಮಾರ್​ ಅವರು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಶಿವಮೊಗ್ಗ ನಗರದಿಂದ 10 ಕಿಮೀ ದೂರವಿರುವ ಮತ್ತೂರು ಗ್ರಾಮಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಸಿಕ್ಕವರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದಾರೆ. ಇದು ಒಂದು ರೀತಿ ಸಹಜ ಸಂಭಾಷಣೆ ಎಂಬುವಂತೆ ಇದೆ.
ಎಡಿಜಿಪಿ ಅಲೋಕ್ ಕುಮಾರ್ ಸಂಸ್ಕೃತ ಗ್ರಾಮ ಮತ್ತೂರಿಗೆ ಭೇಟಿ
ಈ ವಿಚಾರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೊಸ್ಟ್ ಮಾಡಿದ್ದಾರೆ.

‘ಸಂಸ್ಕೃತ ಒಂದು ಶಾಸ್ತ್ರೀಯ ಭಾಷೆ, ಅದರ ದನಿಯೇ ಕಿವಿಗೆ ಸಂಗೀತವಿದ್ದಂತೆ, ಈ ನಿಟ್ಟಿನಲ್ಲಿ ಮತ್ತೂರಿಗೆ ಭೇಟಿ ನೀಡಿ ಅಲ್ಲಿನವರ ಜೊತೆ ಒಂದಿಷ್ಟು ಮಾತುಕತೆ ನಡೆಸಿದೆ. ಎಲ್ಲ ಶಾಸ್ತ್ರೀಯ ಭಾಷೆಗಳನ್ನು ರಕ್ಷಿಸುವ ಹಾಗೂ ಪ್ರೋತ್ಸಾಹಿಸುವ ಅಗತ್ಯತೆ ಇದೆ’ ಎಂದು ಅಲೊಕ್ ಕುಮಾರ್ ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...