Tuesday, May 5, 2026
Tuesday, May 5, 2026

ಇಂಗ್ಲೆಂಡ್ ವಿರುದ್ಧ ನೆಲಕಚ್ಚಿದ ಶ್ರೀಲಂಕಾ

Date:

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ A – ಗುಂಪಿನ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳ ನಡುವೆ ಪಂದ್ಯ ನಡೆಯಿತು. ಶ್ರೀಲಂಕಾ ತಂಡದ ವಿರುದ್ಧ ಇಂಗ್ಲೆಂಡ್ ರೋಚಕ ಜಯಗಳಿಸಿದೆ.

ಶಾರ್ಜಾದ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 163 ರನ್ ಕಲೆಹಾಕಿತು. ಆರಂಭಿಕ ಹಿನ್ನಡೆ ಕಂಡು ರೋಚಕ ಬ್ಯಾಟಿಂಗ್ ಮಾಡಿದ ಜೋಸ್ ಬಟ್ಲರ್ ಮತ್ತು ಇಯಾನ್ ಮಾರ್ಗನ್ ರವರ ಉತ್ತಮ ಪ್ರದರ್ಶನದೊಂದಿಗೆ ತಂಡದ ಗೆಲುವಿಗೆ ಆಸರೆಯಾದರು.

ಜೋಸ್ ಬಟ್ಲರ್ ರವರು 67 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ಸಿಡಿಸಿ 101 ರನ್ ಗಳಿಸುವ ಮೂಲಕ ಸೆಂಚುರಿ ಬಾರಿಸಿದರು. ಹಾಗೆಯೇ ಇಯಾನ್ ಮಾರ್ಗನ್ ರವರು 36 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಗಳನ್ನು ಸಿಡಿಸಿ 40 ರನ್ ಗಳನ್ನೂ ಕಲೆ ಹಾಕಿದರು.

5.2 ಓವರ್ ಗಳಲ್ಲಿ ಕೇವಲ 35 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ತಂಡದ ಸ್ಥಿತಿ ರಕ್ಷಣಾತ್ಮಕ ಆಟದೊಂದಿಗೆ ಇನ್ನಿಂಗ್ಸ್ ಕಟ್ಟಿದ ಈ ಜೋಡಿ ಕ್ರಮೇಣ ಅಬ್ಬರಿಸತೊಡಗಿ 4 ನೇ ವಿಕೆಟ್ ಗೆ ಕೇವಲ 78 ಎಸೆತಗಳಲ್ಲಿ 112 ರನ್ ಗಳ ಕಾಣಿಕೆ ನೀಡಿದರು. ಇಂಗ್ಲೆಂಡ್ ತಂಡ ಕೊನೆಯ 10 ಓವರ್ ಗಳಲ್ಲಿ 1 ವಿಕೆಟ್ ಗೆ 116 ರನ್ ಗಳಿಸಿತು. ಅದರಲ್ಲೂ ಇನ್ನಿಂಗ್ಸ್ ನ ಕೊನೆಯ ಓವರ್ ನ (19.5) ಕೊನೆಯ ಬಾಲ್ ನಲ್ಲಿ ಸಿಕ್ಸರ್ ಸಿಡಿಸುವುದರ ಮೂಲಕ ಬಟ್ಲರ್ ಆಕರ್ಷಕ ಶತಕ ಪೂರೈಸಿದರು. ಇದರೊಂದಿಗೆ ಟಿ – 20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ 8 ನೇ ಹಾಗೂ ಋತುವಿನ ಮೊದಲ ಆಟಗಾರ ಎಂಬ ಗೌರವಕ್ಕೆ ಬಟ್ಲರ್ ಪಾತ್ರರಾದರು.

ಒಟ್ಟಿನಲ್ಲಿ ಇವರಿಬ್ಬರ ಉತ್ತಮ ಪ್ರದರ್ಶನ ಮೂಲಕ ಬಹಳ ತಾಳ್ಮೆಯಿಂದ ಸಮಯೋಚಿತ ಬ್ಯಾಟಿಂಗ್ ಫಲವಾಗಿ ಇಂಗ್ಲೆಂಡ್ ತಂಡ ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ 12 ರ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ 164 ರನ್ ಗಳ ಸವಾಲ್ ಹಾಕಿತು.
163 ರನ್ ಗಳನ್ನ ಗೆಲುವಿನ ಗುರಿ ಬೆನ್ನತ್ತಿ ಹೋರಾಡುವ ಹೊತ್ತಿಗೆ 8 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿತು. ತಂಡದ ಪ್ರಮುಖ ಬ್ಯಾಟ್ಸ್ಮನ್ ಗಳು ಬಹಳ ಬೇಗನೆ ವಿಕೆಟ್ ಗಳನ್ನ ಒಪ್ಪಿಸಿ ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾ 19 ಓವರ್ ಗಳಲ್ಲಿ 137 ರನ್ ಗಳಿಸಿತು.ತಲಾ 2 ವಿಕೆಟ್ ಗಳಿಸಿದ ಇಂಗ್ಲೆಂಡ್ ತಂಡದ ಮೋಯಿನ್ ಅಲಿ, ಆದಿಲ್ ರಶೀದ್ ಮತ್ತು ಕ್ರಿಸ್ ಜೋರ್ಡಾನ್ ಅವರು ಶ್ರೀಲಂಕಾದ ಕುಸಿತಕ್ಕೆ ಕಾರಣರಾದರು. ಇಂಗ್ಲೆಂಡ್ ತಂಡಕ್ಕೆ ಶರಣಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...