Wednesday, October 2, 2024
Wednesday, October 2, 2024

ಇಂಗ್ಲೆಂಡ್ ವಿರುದ್ಧ ನೆಲಕಚ್ಚಿದ ಶ್ರೀಲಂಕಾ

Date:

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ A – ಗುಂಪಿನ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳ ನಡುವೆ ಪಂದ್ಯ ನಡೆಯಿತು. ಶ್ರೀಲಂಕಾ ತಂಡದ ವಿರುದ್ಧ ಇಂಗ್ಲೆಂಡ್ ರೋಚಕ ಜಯಗಳಿಸಿದೆ.

ಶಾರ್ಜಾದ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 163 ರನ್ ಕಲೆಹಾಕಿತು. ಆರಂಭಿಕ ಹಿನ್ನಡೆ ಕಂಡು ರೋಚಕ ಬ್ಯಾಟಿಂಗ್ ಮಾಡಿದ ಜೋಸ್ ಬಟ್ಲರ್ ಮತ್ತು ಇಯಾನ್ ಮಾರ್ಗನ್ ರವರ ಉತ್ತಮ ಪ್ರದರ್ಶನದೊಂದಿಗೆ ತಂಡದ ಗೆಲುವಿಗೆ ಆಸರೆಯಾದರು.

ಜೋಸ್ ಬಟ್ಲರ್ ರವರು 67 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ಸಿಡಿಸಿ 101 ರನ್ ಗಳಿಸುವ ಮೂಲಕ ಸೆಂಚುರಿ ಬಾರಿಸಿದರು. ಹಾಗೆಯೇ ಇಯಾನ್ ಮಾರ್ಗನ್ ರವರು 36 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಗಳನ್ನು ಸಿಡಿಸಿ 40 ರನ್ ಗಳನ್ನೂ ಕಲೆ ಹಾಕಿದರು.

5.2 ಓವರ್ ಗಳಲ್ಲಿ ಕೇವಲ 35 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ತಂಡದ ಸ್ಥಿತಿ ರಕ್ಷಣಾತ್ಮಕ ಆಟದೊಂದಿಗೆ ಇನ್ನಿಂಗ್ಸ್ ಕಟ್ಟಿದ ಈ ಜೋಡಿ ಕ್ರಮೇಣ ಅಬ್ಬರಿಸತೊಡಗಿ 4 ನೇ ವಿಕೆಟ್ ಗೆ ಕೇವಲ 78 ಎಸೆತಗಳಲ್ಲಿ 112 ರನ್ ಗಳ ಕಾಣಿಕೆ ನೀಡಿದರು. ಇಂಗ್ಲೆಂಡ್ ತಂಡ ಕೊನೆಯ 10 ಓವರ್ ಗಳಲ್ಲಿ 1 ವಿಕೆಟ್ ಗೆ 116 ರನ್ ಗಳಿಸಿತು. ಅದರಲ್ಲೂ ಇನ್ನಿಂಗ್ಸ್ ನ ಕೊನೆಯ ಓವರ್ ನ (19.5) ಕೊನೆಯ ಬಾಲ್ ನಲ್ಲಿ ಸಿಕ್ಸರ್ ಸಿಡಿಸುವುದರ ಮೂಲಕ ಬಟ್ಲರ್ ಆಕರ್ಷಕ ಶತಕ ಪೂರೈಸಿದರು. ಇದರೊಂದಿಗೆ ಟಿ – 20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ 8 ನೇ ಹಾಗೂ ಋತುವಿನ ಮೊದಲ ಆಟಗಾರ ಎಂಬ ಗೌರವಕ್ಕೆ ಬಟ್ಲರ್ ಪಾತ್ರರಾದರು.

ಒಟ್ಟಿನಲ್ಲಿ ಇವರಿಬ್ಬರ ಉತ್ತಮ ಪ್ರದರ್ಶನ ಮೂಲಕ ಬಹಳ ತಾಳ್ಮೆಯಿಂದ ಸಮಯೋಚಿತ ಬ್ಯಾಟಿಂಗ್ ಫಲವಾಗಿ ಇಂಗ್ಲೆಂಡ್ ತಂಡ ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ 12 ರ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ 164 ರನ್ ಗಳ ಸವಾಲ್ ಹಾಕಿತು.
163 ರನ್ ಗಳನ್ನ ಗೆಲುವಿನ ಗುರಿ ಬೆನ್ನತ್ತಿ ಹೋರಾಡುವ ಹೊತ್ತಿಗೆ 8 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿತು. ತಂಡದ ಪ್ರಮುಖ ಬ್ಯಾಟ್ಸ್ಮನ್ ಗಳು ಬಹಳ ಬೇಗನೆ ವಿಕೆಟ್ ಗಳನ್ನ ಒಪ್ಪಿಸಿ ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾ 19 ಓವರ್ ಗಳಲ್ಲಿ 137 ರನ್ ಗಳಿಸಿತು.ತಲಾ 2 ವಿಕೆಟ್ ಗಳಿಸಿದ ಇಂಗ್ಲೆಂಡ್ ತಂಡದ ಮೋಯಿನ್ ಅಲಿ, ಆದಿಲ್ ರಶೀದ್ ಮತ್ತು ಕ್ರಿಸ್ ಜೋರ್ಡಾನ್ ಅವರು ಶ್ರೀಲಂಕಾದ ಕುಸಿತಕ್ಕೆ ಕಾರಣರಾದರು. ಇಂಗ್ಲೆಂಡ್ ತಂಡಕ್ಕೆ ಶರಣಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...