Wednesday, December 10, 2025
Wednesday, December 10, 2025

ಕನ್ನಡಪರ ಸಂಘಟನೆ ಅಧ್ಯಕ್ಷರಿಗೆ ಕದಂಬ ರತ್ನ ಪ್ರಶಸ್ತಿ

Date:

ಬನವಾಸಿ ತಾಲೂಕಿನ ಹೋರಾಟ ಸಮಿತಿ ಅಧ್ಯಕ್ಷ ಉದಯಕುಮಾರ್ ಕಾನಳ್ಳಿ ಅವರಿಗೆ ರಾಜ್ಯ ಕನ್ನಡ ಪರ ಸಂಘಟನೆ ಕದಂಬ ಸೈನ್ಯ ವತಿಯಿಂದ ‘ಕದಂಬರತ್ನ ಪ್ರಶಸ್ತಿ – 2022’ ನೀಡಿ ಗೌರವಿಸಿದೆ.
ಜುಲೈ 26ರಂದು ಮಂಡ್ಯದಲ್ಲಿ ನಡೆದ ಕನ್ನಡ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು.
ಸಂಘಟನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಅವರು ಕಾನಳ್ಳಿ ಅವರ ಮನೆಗೆ ಬಂದು ಈ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಈ ಹಿಂದೆ ಎಂಟು ವರ್ಷಗಳ ಕಾಲ ಉದಯ್ ಕಾನಳ್ಳಿ ಅವರು ಸಂಘಟನೆಯ ರಾಜ್ಯ ಸಂಚಾಲಕರಾಗಿ ಕೆಲಸ ಮಾಡಿದ್ದರು.
ಉದಯಕುಮಾರ್ ಕಾನಳ್ಳಿ ಅವರ ಕುರಿತು ಮಾತನಾಡಿದ ರಾಜ್ಯಾಧ್ಯಕ್ಷ ರಮೇಶ್ ಅವರು, ಕನ್ನಡ ಪರ ಸಂಘಟನೆ ಕಟ್ಟುವಲ್ಲಿ ಮತ್ತು ಬೆಳೆಸುವಲ್ಲಿ ಕಾನಳ್ಳಿ ಅವರು ನಿರಂತರವಾಗಿ ಶ್ರಮಿಸಿದ್ದಾರೆ. ಇವರ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದರು.

ಉದಯ್ ಕಾನಳ್ಳಿ ಅವರ ಸಾಮಾಜಿಕ ಸೇವೆ , ಕನ್ನಡಪರ ಕಾರ್ಯಗಳನ್ನು ಮನಗಂಡು ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ರಾಜ್ಯ ಸಮಿತಿ ಸದಸ್ಯ ಮಹಾದೇವ್ ಸ್ವಾಮಿ ಮೈಸೂರ್ ಗುತ್ಯಪ್ಪ ಮಾದರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...