Wednesday, October 2, 2024
Wednesday, October 2, 2024

ಕನ್ನಡಪರ ಸಂಘಟನೆ ಅಧ್ಯಕ್ಷರಿಗೆ ಕದಂಬ ರತ್ನ ಪ್ರಶಸ್ತಿ

Date:

ಬನವಾಸಿ ತಾಲೂಕಿನ ಹೋರಾಟ ಸಮಿತಿ ಅಧ್ಯಕ್ಷ ಉದಯಕುಮಾರ್ ಕಾನಳ್ಳಿ ಅವರಿಗೆ ರಾಜ್ಯ ಕನ್ನಡ ಪರ ಸಂಘಟನೆ ಕದಂಬ ಸೈನ್ಯ ವತಿಯಿಂದ ‘ಕದಂಬರತ್ನ ಪ್ರಶಸ್ತಿ – 2022’ ನೀಡಿ ಗೌರವಿಸಿದೆ.
ಜುಲೈ 26ರಂದು ಮಂಡ್ಯದಲ್ಲಿ ನಡೆದ ಕನ್ನಡ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು.
ಸಂಘಟನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಅವರು ಕಾನಳ್ಳಿ ಅವರ ಮನೆಗೆ ಬಂದು ಈ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಈ ಹಿಂದೆ ಎಂಟು ವರ್ಷಗಳ ಕಾಲ ಉದಯ್ ಕಾನಳ್ಳಿ ಅವರು ಸಂಘಟನೆಯ ರಾಜ್ಯ ಸಂಚಾಲಕರಾಗಿ ಕೆಲಸ ಮಾಡಿದ್ದರು.
ಉದಯಕುಮಾರ್ ಕಾನಳ್ಳಿ ಅವರ ಕುರಿತು ಮಾತನಾಡಿದ ರಾಜ್ಯಾಧ್ಯಕ್ಷ ರಮೇಶ್ ಅವರು, ಕನ್ನಡ ಪರ ಸಂಘಟನೆ ಕಟ್ಟುವಲ್ಲಿ ಮತ್ತು ಬೆಳೆಸುವಲ್ಲಿ ಕಾನಳ್ಳಿ ಅವರು ನಿರಂತರವಾಗಿ ಶ್ರಮಿಸಿದ್ದಾರೆ. ಇವರ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದರು.

ಉದಯ್ ಕಾನಳ್ಳಿ ಅವರ ಸಾಮಾಜಿಕ ಸೇವೆ , ಕನ್ನಡಪರ ಕಾರ್ಯಗಳನ್ನು ಮನಗಂಡು ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ರಾಜ್ಯ ಸಮಿತಿ ಸದಸ್ಯ ಮಹಾದೇವ್ ಸ್ವಾಮಿ ಮೈಸೂರ್ ಗುತ್ಯಪ್ಪ ಮಾದರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...