Monday, February 2, 2026
Monday, February 2, 2026

ಮದ್ಯ ಮತ್ತು ಧೂಮಪಾನಿಗಳೇ ನಿಮಗೆ ಲೈಫ್ ರಿಸ್ಕ್ ಕಟ್ಟಿಟ್ಟ ಬುತ್ತಿ

Date:

ಮದ್ಯಪಾನ, ಧೂಮಪಾನ ಪ್ರಿಯರಿಗೆ ಇದು ಆಘಾತಕಾರಿ ಸುದ್ದಿ. ಅಧ್ಯಯನವೊಂದರಲ್ಲಿ ಕಂಡುಬಂದಿರುವ ಈ ಅಂಶಗಳು ಮದ್ಯ ಹಾಗೂ ಬೀಡಿ ಸಿಗರೇಟ್​ ಕೈಗೆತ್ತಿಕೊಳ್ಳುವ ಮುನ್ನ ಒಮ್ಮೆ ಯೋಚಿಸುವಂತೆ ಮಾಡಿದರೂ ಅಚ್ಚರಿ ಏನಲ್ಲ. ಇಂಥದ್ದೊಂದು ಆತಂಕಕಾರಿ ಅಂಶ ಈ ಜಾಗತಿಕ ಅಧ್ಯಯನಲ್ಲಿ ಕಂಡುಬಂದಿದೆ.

ಯುನಿವರ್ಸಿಟಿ ಆಫ್​ ವಾಷಿಂಗ್ಟನ್ಸ್​ ಸ್ಕೂಲ್​ ಆಫ್​ ಮೆಡಿಸಿನ್​ನ ಇನ್​ಸ್ಟಿಟ್ಯೂಟ್​ ಫಾರ್​​ ಹೆಲ್ತ್​ ಮೆಟ್ರಿಕ್ಸ್​ ಆಯಂಡ್ ಇವ್ಯಾಲ್ಯುವೇಷನ್​ ನಿರ್ದೇಶಕ ಡಾ. ಕ್ರಿಸ್ಟೋಫರ್ ಮುರ್ರೆ ಅವರು ಮಂಡಿಸಿದ ಅಧ್ಯಯನದಲ್ಲಿ ಈ ಆಘಾತಕಾರಿ ಅಂಶಗಳು ಕಂಡುಬಂದಿದೆ. ಇದನ್ನು ಲ್ಯಾನ್ಸೆಟ್ ಮೆಡಿಕಲ್ ಜರ್ನಲ್ ಪ್ರಕಟಿಸಿದೆ. ಈ ಅಧ್ಯಯನದಲ್ಲಿನ ಅಂಶಗಳು ಮದ್ಯ ಹಾಗೂ ಧೂಮಪಾನ ಪ್ರಿಯರಿಗೆ ಎಚ್ಚರಿಕೆ ಗಂಟೆಯಂತಿದೆ.

ಲ್ಯಾನ್ಸೆಟ್​​ನಲ್ಲಿ ಪ್ರಕಟಗೊಂಡಿರುವ ಗ್ಲೋಬಲ್​ ಬರ್ಡನ್​ ಆಫ್ ಡಿಸೀಸಸ್​, ಇಂಜುರೀಸ್ ಆಯಂಡ್ ರಿಸ್ಕ್​ ಫ್ಯಾಕ್ಟರ್ಸ್​ ರಿಪೋರ್ಟ್ 2019 ಎಂಬ ಶೀರ್ಷಿಕೆಯ ಅಧ್ಯಯನ ವರದಿಯಲ್ಲಿನ ಅಂಶಗಳು ಒಂದಷ್ಟು ಮಾಹಿತಿಯನ್ನು ಹೊರಹಾಕಿವೆ. ಇದರ ಪ್ರಕಾರ 2019ರಲ್ಲಿ ಭಾರತದಲ್ಲಿನ ಕ್ಯಾನ್ಸರ್​ ರೋಗಿಗಳಲ್ಲಿ ಸತ್ತವರ ಪೈಕಿ ಶೇ. 37 ರೋಗಿಗಳ ಸಾವಿಗೆ ಧೂಮಪಾನ, ಮದ್ಯಪಾನ ಮತ್ತು ಹೈ ಬಾಡಿ ಮಾಸ್​ ಇಂಡೆಕ್ಸ್​ ಕಾರಣ ಎಂಬುದು ಕಂಡುಬಂದಿದೆ. ಜಾಗತಿಕವಾಗಿ ಹೇಳುವುದಾದರೆ, ಕ್ಯಾನ್ಸರ್​​ನಿಂದ ಸತ್ತವರ ಪೈಕಿ ಶೇ. 44.4 ಸಾವಿಗೆ ಈ ರಿಸ್ಕ್​ ಫ್ಯಾಕ್ಟರ್​​ಗಳೇ ಕಾರಣ ಎಂದು ತಿಳಿದುಬಂದಿದೆ.

ಇದೇ ಅಧ್ಯಯನದ ಪ್ರಕಾರ, 2019ರಲ್ಲಿ ಜಗತ್ತಿನಲ್ಲಿ ಸಂಭವಿಸಿದ ಪುರುಷ ಕ್ಯಾನ್ಸರ್​ ರೋಗಿಗಳ ಸಾವಿನಲ್ಲಿ ಶೇ. 50.6ರಷ್ಟು ಸಾವು ಹಾಗೂ ಮಹಿಳಾ ಕ್ಯಾನ್ಸರ್​ ರೋಗಿಗಳಲ್ಲಿ ಶೇ. 36.3 ಸಾವು ಈ ರಿಸ್ಕ್ ಫ್ಯಾಕ್ಟರ್​ಗಳಿಂದ ಸಂಭವಿಸಿದೆ ಎಂಬುದು ಕಂಡುಬಂದಿದೆ. ಅಂದರೆ ಈ ಅವಧಿಯಲ್ಲಿನ ಕ್ಯಾನ್ಸರ್​ ರೋಗಿಗಳಲ್ಲಿ 2.88 ದಶಲಕ್ಷ ಪುರುಷರು ಮತ್ತು 1.58 ದಶಲಕ್ಷ ಮಹಿಳೆಯರ ಸಾವು ಧೂಮಪಾನ, ಮದ್ಯಪಾನ, ಅತಿಯಾದ ಬಿಎಂಐ ಮುಂತಾದ ರಿಸ್ಕ್​ ಫ್ಯಾಕ್ಟರ್​ಗಳಿಂದ ಸಂಭವಿಸಿದೆ ಎಂದು ಈ ಅಧ್ಯಯನ ಹೇಳಿದೆ.

ಈ ಅಧ್ಯಯನವು 23 ವಿವಿಧ ಕ್ಯಾನ್ಸರ್​ಗಳಲ್ಲಿ ಸಾವು ಅಥವಾ ಆರೋಗ್ಯ ಅತಿಯಾಗಿ ಹದಗೆಡುವಂಥದ್ದಕ್ಕೆ ಕಾರಣವಾಗುವ 34 ವಿಧದ ರಿಸ್ಕ್​ ಫ್ಯಾಕ್ಟರ್​ಗಳ ವಿಶ್ಲೇಷಣೆ ನಡೆಸಿದೆ. ಅವುಗಳ ಪೈಕಿ ಧೂಮಪಾನ, ಮದ್ಯಪಾನ ಮತ್ತು ಅತಿಯಾದ ಬಾಡಿ ಮಾಸ್ ಇಂಡೆಕ್ಸ್​ ಪುರುಷ ಹಾಗೂ ಮಹಿಳೆಯರಿಬ್ಬರಲ್ಲೂ ಸಾವು ಹಾಗೂ ಆರೋಗ್ಯ ಹದಗೆಡುವಲ್ಲಿ ಪ್ರಮುಖ ಕಾರಣವಾಗುತ್ತಿವೆ ಎಂದು ಡಾ.ಮುರ್ರೆ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...