Sunday, August 23, 2026
Sunday, August 23, 2026

ಸಿಇಟಿ 22 ರ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆ ಆರಂಭ

Date:

ಸಿಇಟಿ-2022ರ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆಯು ಇಂದಿನಿಂದ (ಆ.22) ಆರಂಭವಾಗಲಿದೆ. ಮೊದಲ ದಿನ ರ್‍ಯಾಂಕ್‌ 1ರಿಂದ 5 ಸಾವಿರ ವರೆಗೆ ಆನ್‌ಲೈನ್‌ ಮೂಲಕ ನಡೆಸಲಿದೆ.
ಮೀಸಲಾತಿ ಪಡೆಯುವ ವಿದ್ಯಾರ್ಥಿಗಳು ಇದಕ್ಕಾಗಿ ಅರ್ಜಿಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ದೃಢೀಕರಿಸಬೇಕಿದೆ.

ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿಯ ಪ್ರಮಾಣ ಪತ್ರವನ್ನು ಪರಿಶೀಲನೆಗೆ ಒಳಪಡಿಸಬೇಕು. ಆ ನಂತರ ಬಿಇಒ ಇದನ್ನು ದೃಢೀಕರಿಸಿ ಕೆಇಎಗೆ ಅಪ್‌ಲೋಡ್‌ ಮಾಡಲಿದ್ದಾರೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ.

ಸೆ.7ರವರೆಗೆ ಈ ಪ್ರಕ್ರಿಯೆ ನಡೆಯಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಇಎ ಕಚೇರಿಯಲ್ಲೇ ಪರಿಶೀಲನೆಗೆ ಅವಕಾಶ ನೀಡಿದೆ.
ವಿದ್ಯಾರ್ಥಿಗಳು ನೇರವಾಗಿ ಇಲ್ಲಿ ಬಂದು ಪರಿಶೀಲನೆಗೆ ಒಳಪಡಬಹುದಾಗಿದೆ. ಬೆಂಗಳೂರಿನಲ್ಲಿಯೇ ಸುಮಾರು 40 ಸಾವಿರ ವಿದ್ಯಾರ್ಥಿಗಳಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...