Saturday, May 23, 2026
Saturday, May 23, 2026

ತೀವ್ರ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾಗೆ ಭಾರತದಿಂದ ರಸಗೊಬ್ಬರ ಪೂರೈಕೆ

Date:

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತಚಾಚಿದೆ. 21 ಸಾವಿರ ಟನ್​ ರಾಸಾಯನಿಕ ಗೊಬ್ಬರವನ್ನು ಕಳುಹಿಸಿ ಸಹಾಯಕ್ಕೆ ಬಂದಿದೆ.

ವಿಶೇಷ ಬೆಂಬಲದಡಿ ಭಾರತದ ಹೈಕಮಿಷನ್​ ಆ ದೇಶಕ್ಕೆ ನಿನ್ನೆ ರಾಸಾಯನಿಕ ಗೊಬ್ಬರವನ್ನು ಹಸ್ತಾಂತರಿಸಿತು. ಕಳೆದ ತಿಂಗಳು 44 ಸಾವಿರ ಟನ್​ ರಾಸಾಯನಿಕ ಗೊಬ್ಬರವನ್ನು ಪೂರೈಸಲಾಗಿತ್ತು. ಒಟ್ಟಾರೆ ಈ ವರ್ಷ ದ್ವೀಪರಾಷ್ಟ್ರಕ್ಕೆ ಭಾರತ 4 ಬಿಲಿಯನ್​ ಡಾಲರ್​ ನೆರವು ನೀಡಿದಂತಾಗಿದೆ.

ಶ್ರೀಲಂಕಾದ ಕೃಷಿ ಕ್ಷೇತ್ರ ಮತ್ತೆ ಚೇತರಿಕೆ ಕಾಣಲು ಈ ನೆರವು ನೀಡಲಾಗಿದೆ. ದೇಶದ ಆಹಾರ ಭದ್ರತೆಗೂ ಇದು ಬೆಂಬಲವಾಗಿರಲಿದೆ. ಉಭಯ ರಾಷ್ಟ್ರಗಳ ನಿಕಟ ಬಾಂಧವ್ಯವನ್ನೂ ಇದು ತೋರಿಸುತ್ತದೆ” ಎಂದು ಕೊಲಂಬೊದಲ್ಲಿರುವ ಭಾರತ ಹೈಕಮಿಷನ್​ ಸರಣಿ ಟ್ವೀಟ್​ ಮಾಡಿದೆ.

ಶ್ರೀಲಂಕಾದ ಅವಶ್ಯಕತೆಗಳಿಗೆ ಅನುಗುಣವಾಗಿ ಆರ್ಥಿಕ ಸಹಾಯವನ್ನು ನೀಡುವಲ್ಲಿ ಭಾರತ ಮುಂದಿದೆ. ಅಗತ್ಯವಿರುವ ಸಮಯದಲ್ಲಿ ಗರಿಷ್ಠ ಪ್ರಮಾಣದ ಸಹಾಯವನ್ನು ಒದಗಿಸಿದ ದೇಶವಾಗಿದೆ. ಈ ವರ್ಷದ ಆರಂಭದಿಂದ ದ್ವೀಪರಾಷ್ಟ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ನಲುಗಿದೆ. ವಿದೇಶಿ ಸಾಲಗಳನ್ನು ಮರುಪಾವತಿ ಮಾಡುವುದನ್ನು ಮುಂದೂಡಿದೆ. ದೇಶದ 5.7 ಮಿಲಿಯನ್​ ಜನರ ರಕ್ಷಣೆಗಾಗಿ ಲಂಕಾಡಳಿತ ಹಲವು ದೇಶಗಳ ನೆರವು ಬಯಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...