Saturday, March 21, 2026
Saturday, March 21, 2026

ತೀವ್ರ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾಗೆ ಭಾರತದಿಂದ ರಸಗೊಬ್ಬರ ಪೂರೈಕೆ

Date:

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತಚಾಚಿದೆ. 21 ಸಾವಿರ ಟನ್​ ರಾಸಾಯನಿಕ ಗೊಬ್ಬರವನ್ನು ಕಳುಹಿಸಿ ಸಹಾಯಕ್ಕೆ ಬಂದಿದೆ.

ವಿಶೇಷ ಬೆಂಬಲದಡಿ ಭಾರತದ ಹೈಕಮಿಷನ್​ ಆ ದೇಶಕ್ಕೆ ನಿನ್ನೆ ರಾಸಾಯನಿಕ ಗೊಬ್ಬರವನ್ನು ಹಸ್ತಾಂತರಿಸಿತು. ಕಳೆದ ತಿಂಗಳು 44 ಸಾವಿರ ಟನ್​ ರಾಸಾಯನಿಕ ಗೊಬ್ಬರವನ್ನು ಪೂರೈಸಲಾಗಿತ್ತು. ಒಟ್ಟಾರೆ ಈ ವರ್ಷ ದ್ವೀಪರಾಷ್ಟ್ರಕ್ಕೆ ಭಾರತ 4 ಬಿಲಿಯನ್​ ಡಾಲರ್​ ನೆರವು ನೀಡಿದಂತಾಗಿದೆ.

ಶ್ರೀಲಂಕಾದ ಕೃಷಿ ಕ್ಷೇತ್ರ ಮತ್ತೆ ಚೇತರಿಕೆ ಕಾಣಲು ಈ ನೆರವು ನೀಡಲಾಗಿದೆ. ದೇಶದ ಆಹಾರ ಭದ್ರತೆಗೂ ಇದು ಬೆಂಬಲವಾಗಿರಲಿದೆ. ಉಭಯ ರಾಷ್ಟ್ರಗಳ ನಿಕಟ ಬಾಂಧವ್ಯವನ್ನೂ ಇದು ತೋರಿಸುತ್ತದೆ” ಎಂದು ಕೊಲಂಬೊದಲ್ಲಿರುವ ಭಾರತ ಹೈಕಮಿಷನ್​ ಸರಣಿ ಟ್ವೀಟ್​ ಮಾಡಿದೆ.

ಶ್ರೀಲಂಕಾದ ಅವಶ್ಯಕತೆಗಳಿಗೆ ಅನುಗುಣವಾಗಿ ಆರ್ಥಿಕ ಸಹಾಯವನ್ನು ನೀಡುವಲ್ಲಿ ಭಾರತ ಮುಂದಿದೆ. ಅಗತ್ಯವಿರುವ ಸಮಯದಲ್ಲಿ ಗರಿಷ್ಠ ಪ್ರಮಾಣದ ಸಹಾಯವನ್ನು ಒದಗಿಸಿದ ದೇಶವಾಗಿದೆ. ಈ ವರ್ಷದ ಆರಂಭದಿಂದ ದ್ವೀಪರಾಷ್ಟ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ನಲುಗಿದೆ. ವಿದೇಶಿ ಸಾಲಗಳನ್ನು ಮರುಪಾವತಿ ಮಾಡುವುದನ್ನು ಮುಂದೂಡಿದೆ. ದೇಶದ 5.7 ಮಿಲಿಯನ್​ ಜನರ ರಕ್ಷಣೆಗಾಗಿ ಲಂಕಾಡಳಿತ ಹಲವು ದೇಶಗಳ ನೆರವು ಬಯಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...