Saturday, March 21, 2026
Saturday, March 21, 2026

ಕೊರೋನ ನಂತರ ಕರ್ನಾಟಕವೂ ಸೇರಿ ದೇಶದ19ರಾಜ್ಯಗಳ ಆರ್ಥಿಕತೆ ಚೇತರಿಕೆ

Date:

ಕೊರೊನಾ ಸೋಂಕಿನ ಆಘಾತದಿಂದ ಪಾತಾಳಕ್ಕಿಳಿದಿದ್ದ ಆರ್ಥಿಕತೆಗಳು ಈಗ ಪುಟಿದೇಳಲಾರಂಭಿಸಿವೆ.

ಕರ್ನಾಟಕ ಸೇರಿದಂತೆ 19 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ನಿಟ್ಟಿನಲ್ಲಿ ಧನಾತ್ಮಕ ಬೆಳವಣಿಗೆಯನ್ನು ಕಂಡಿದ್ದು, 2021-22ರ ಹಣಕಾಸು ವರ್ಷದಲ್ಲಿ ಎರಡಂಕಿ ಪ್ರಗತಿಯನ್ನು ಸಾಧಿಸಿವೆ.

21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕೃತ ದತ್ತಾಂಶಗಳ ವಿಶ್ಲೇಷಣೆಯಿಂದ ಈ ಅಂಶ ತಿಳಿದುಬಂದಿದೆ.

ಆದರೆ, ಗುಜರಾತ್‌ ಹಾಗೂ ಮಹಾರಾಷ್ಟ್ರ ಸೇರಿದಂತೆ 11 ರಾಜ್ಯಗಳ ಪ್ರಗತಿ ದರದ ಅಂಕಿಅಂಶ ಲಭ್ಯವಾಗಿಲ್ಲ.
ಈ ವಿಶ್ಲೇಷಣೆಯ ಪ್ರಕಾರ, ಕೇಂದ್ರ ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ರಾಷ್ಟ್ರೀಯ ಲಾಕ್‌ಡೌನ್‌ ಹೇರಿದಾಗ ಕುಸಿದಿದ್ದ 19 ರಾಜ್ಯಗಳು- ಕೇಂದ್ರಾಡಳಿತ ಪ್ರದೇಶಗಳ ಜಿಎಸ್‌ಡಿಪಿ(ರಾಜ್ಯದ ಒಟ್ಟು ಆಂತರಿಕ ಉತ್ಪನ್ನ) ದರ 2021-22ರಲ್ಲಿ ಕೊರೊನಾಪೂರ್ವ ಮಟ್ಟಕ್ಕೆ ತಲುಪಿದೆ.

ಇಂಥ ಸಾಧನೆ ಮಾಡಿದ ರಾಜ್ಯಗಳೆಂದರೆ, ಕರ್ನಾಟಕ, ಆಂಧ್ರಪ್ರದೇಶ, ರಾಜಸ್ಥಾನ, ಬಿಹಾರ, ತೆಲಂಗಾಣ, ದೆಹಲಿ, ಒಡಿಶಾ, ಮಧ್ಯಪ್ರದೇಶ, ಹರ್ಯಾಣ, ತ್ರಿಪುರ, ಸಿಕ್ಕಿಂ, ಹಿಮಾಚಲಪ್ರದೇಶ, ಮೇಘಾಲಯ, ಜಾರ್ಖಂಡ್‌, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌ , ಉತ್ತರಾಖಂಡ ಮತ್ತು ಪುದುಚೇರಿ.

ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಅಂಕಿಅಂಶಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...