Wednesday, February 4, 2026
Wednesday, February 4, 2026

ಬೆಳಗಾವಿ ಚಿರತೆ ಹಿಡಿಯಲು ಸಕ್ರೆಬೈಲ್ ಪಡೆ

Date:

ಬೆಳಗಾವಿ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಇನ್ನೂ ಅರಣ್ಯ ಇಲಾಖೆಯ ಕಣ್ಣು ತಪ್ಪಿಸಿಕೊಂಡಿದ್ದು ಇದೀಗ ಚಿರತೆ ಸೆರೆಗೆ ಶಿವಮೊಗ್ಗದಿಂದ ವಿಶೇಷ ತಂಡ ಬೆಳಗಾವಿಗೆ ಹೊರಟಿದೆ.

ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಸೆರೆಗೆ ಅರಣ್ಯ ಇಲಾಖೆ ನಾನಾ ರೀತಿಯ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಿಲ್ಲ, ಇದೀಗ ಶಿವಮೊಗ್ಗದ ಡಾಟಿಂಗ್ ಸ್ಪೆಷಲಿಸ್ಟ್ ವನ್ಯಜೀವಿ ತಜ್ಞ ಡಾ. ವಿನಯ್ ನೇತೃತ್ವದಲ್ಲಿ ವಿಶೇಷ ತಂಡವೊಂದು ಬೆಳಗಾವಿಗೆ ತೆರಳಲು ಸಿದ್ಧವಾಗಿದೆ, ಇದರಲ್ಲಿ ಸಕ್ರೇಬೈಲು ಆನೆ ಬಿಡಾರದ ಅರ್ಜುನ ಹಾಗೂ ಆಲೆ ಆನೆಗಳೂ ಸೇರಿ ವೈದ್ಯರು, ಸಹಾಯಕ ಸಿಬ್ಬಂದಿ, ಮಾವುತರು, ಕಾವಾಡಿಗಳು ಮತ್ತು ಬಿಡಾರದ ಸಹಾಯಕ ಸಿಬ್ಬಂದಿ ಸೇರಿದಂತೆ 8 ಜನರ ತಂಡ ಬೆಳಗಾವಿಗೆ ಹೊರಟಿದೆ.
ಚಿರತೆ ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಲ ಶಾಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಅಲ್ಲದೆ ಸೋಮವಾರ ಮುಂಜಾನೆ ನಗರದ ಪ್ರಮುಖ ರಸ್ತೆಯಲ್ಲೇ ಸಂಚರಿಸಿ ಭೀತಿ ಹುಟ್ಟಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...