Wednesday, April 29, 2026
Wednesday, April 29, 2026

ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಡೇರಿಗೆ ಭೇಟಿ

Date:

ಇತ್ತೀಚೆಗೆ ಕ್ರಿಯೇಟಿವ್‌ ಪಿ.ಯು ಕಾಲೇಜು, ಕಾರ್ಕಳ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ “ಕೈಗಾರಿಕಾ ಭೇಟಿ” ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್‌ ಕೈಗಾರಿಕೆಗೆ ಭೇಟಿ ನೀಡಿದ್ದು. ಕೈಗಾರಿಕೆಯಲ್ಲಿನ ಹಾಲು ಉತ್ಪಾದನಾ ಘಟಕದ ಪ್ರಕ್ರೀಯೆಗಳು, ಹಂತಗಳು ಉತ್ಪಾದನಾ ವಿಧಾನಗಳು ಹಾಗೂ ಉತ್ಪನ್ನಗಳ ಬಗ್ಗೆ ಸವಿಸ್ಥಾರವಾದ ಮಾಹಿತಿಯನ್ನು ಸಂಗ್ರಹಿಸಿದರು.

ಬದುಕಿನಲ್ಲಿ ಪಠ್ಯದ ಜ್ಞಾನದ ಜೊತೆಗೆ ಪಠ್ಯದಲ್ಲಿನ ವಿಷಯಗಳ ಪ್ರಾಯೋಗಿಕ ಜ್ಞಾನವು ಮಹತ್ತರವಾದದು ಹಾಗೂ ಒಬ್ಬ ಯಶಸ್ವಿ ಉದ್ಯಮದಾರನ್ನಾಗಿಸಲು ಸಹಾಯವಾಗಬಹುದು ಎಂಬುದು ಸಂಸ್ಧೆಯ ಆಶಯ. ಈ ಹಿನ್ನೆಲೆಯಲ್ಲಿ ಪಠ್ಯದ ಜೊತೆಗೆ ಅನೇಕ ಪಠ್ಯೇತರ ಚಟುವಟಿಕಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವುದು ಸಂಸ್ಥೆಯ ವಿಶೇಷ ಎನ್ನಬಹುದು.

ಇಂದಿನ ಜಗತ್ತಿನಲ್ಲಿ ನಾವು ನವೀನ ಉಪಕರಣಗಳನ್ನು ಬಳಸುತ್ತಿದ್ದೇವೆ. ಸಾಂಪ್ರದಾಯಕ (ಹಳೆಯ) ಉತ್ಪನ್ನಗಳು ಮರೆಯಾಗುತ್ತಿವೆ. ಹಳೆಯ ಸಂಪ್ರದಾಯಕ ಕೃಷಿ ಮತ್ತು ಕೃಷಿಯೇತರ ಸಲಕರಣೆಗಳನ್ನು ವೀಕ್ಷಿಸುವ ಸಲುವಾಗಿ‌ ವಿದ್ಯಾರ್ಥಿಗಳನ್ನು ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿನ ಗುತ್ತಿನ ಮನೆಗೆ ಭೇಟಿ ನೀಡಿಸಲಾಗಿತ್ತು ಇಲ್ಲಿನ ಹಳೆಯ ಗುತ್ತಿನ ಮನೆ, ದೈವದ ಮೂರ್ತಿಗಳು, ಕತ್ತಿ, ಅಕ್ಕಿಮುಡಿ, ತಿರಿ, ಜನಪದ ಕಲೆಗಳಾದ ಕೋಲ, ಯಕ್ಷಗಾನ ಇವುಗಳ ಪ್ರಾಮುಖ್ಯತೆಯನ್ನು ಮಕ್ಕಳಿಗೆ ವಿವರಿಸಲಾಯಿತು.

ಒಟ್ಟಾರೆ ಇಂದಿನ ನಾಗಾಲೋಟದ ಪ್ರಪಂಚದಲ್ಲಿ ಹೊಸತನ್ನು ಅನುಭವಿಸುತ್ತಾ ಹಳೆಯದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುತ್ತಾ ವಿದ್ಯಾರ್ಜನೆ ಮಾಡುವುದು ಈ ಸಂಸ್ಥೆಯ ವಿಶೇಷ. ಈ ಸಂದರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ರಾಘವೇಂದ್ರ ಬಿ ರಾವ್‌, ಉಮೇಶ್‌, ಚಂದ್ರಕಾಂತ್‌, ರಾಜೇಶ್‌ ಶೆಟ್ಟಿ, ಅಕ್ಷತಾ ಜೈನ್‌ ಹಾಗೂ ಭೋಧಕೇತರ ವೃಂದದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...