Wednesday, October 2, 2024
Wednesday, October 2, 2024

ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಡೇರಿಗೆ ಭೇಟಿ

Date:

ಇತ್ತೀಚೆಗೆ ಕ್ರಿಯೇಟಿವ್‌ ಪಿ.ಯು ಕಾಲೇಜು, ಕಾರ್ಕಳ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ “ಕೈಗಾರಿಕಾ ಭೇಟಿ” ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್‌ ಕೈಗಾರಿಕೆಗೆ ಭೇಟಿ ನೀಡಿದ್ದು. ಕೈಗಾರಿಕೆಯಲ್ಲಿನ ಹಾಲು ಉತ್ಪಾದನಾ ಘಟಕದ ಪ್ರಕ್ರೀಯೆಗಳು, ಹಂತಗಳು ಉತ್ಪಾದನಾ ವಿಧಾನಗಳು ಹಾಗೂ ಉತ್ಪನ್ನಗಳ ಬಗ್ಗೆ ಸವಿಸ್ಥಾರವಾದ ಮಾಹಿತಿಯನ್ನು ಸಂಗ್ರಹಿಸಿದರು.

ಬದುಕಿನಲ್ಲಿ ಪಠ್ಯದ ಜ್ಞಾನದ ಜೊತೆಗೆ ಪಠ್ಯದಲ್ಲಿನ ವಿಷಯಗಳ ಪ್ರಾಯೋಗಿಕ ಜ್ಞಾನವು ಮಹತ್ತರವಾದದು ಹಾಗೂ ಒಬ್ಬ ಯಶಸ್ವಿ ಉದ್ಯಮದಾರನ್ನಾಗಿಸಲು ಸಹಾಯವಾಗಬಹುದು ಎಂಬುದು ಸಂಸ್ಧೆಯ ಆಶಯ. ಈ ಹಿನ್ನೆಲೆಯಲ್ಲಿ ಪಠ್ಯದ ಜೊತೆಗೆ ಅನೇಕ ಪಠ್ಯೇತರ ಚಟುವಟಿಕಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವುದು ಸಂಸ್ಥೆಯ ವಿಶೇಷ ಎನ್ನಬಹುದು.

ಇಂದಿನ ಜಗತ್ತಿನಲ್ಲಿ ನಾವು ನವೀನ ಉಪಕರಣಗಳನ್ನು ಬಳಸುತ್ತಿದ್ದೇವೆ. ಸಾಂಪ್ರದಾಯಕ (ಹಳೆಯ) ಉತ್ಪನ್ನಗಳು ಮರೆಯಾಗುತ್ತಿವೆ. ಹಳೆಯ ಸಂಪ್ರದಾಯಕ ಕೃಷಿ ಮತ್ತು ಕೃಷಿಯೇತರ ಸಲಕರಣೆಗಳನ್ನು ವೀಕ್ಷಿಸುವ ಸಲುವಾಗಿ‌ ವಿದ್ಯಾರ್ಥಿಗಳನ್ನು ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿನ ಗುತ್ತಿನ ಮನೆಗೆ ಭೇಟಿ ನೀಡಿಸಲಾಗಿತ್ತು ಇಲ್ಲಿನ ಹಳೆಯ ಗುತ್ತಿನ ಮನೆ, ದೈವದ ಮೂರ್ತಿಗಳು, ಕತ್ತಿ, ಅಕ್ಕಿಮುಡಿ, ತಿರಿ, ಜನಪದ ಕಲೆಗಳಾದ ಕೋಲ, ಯಕ್ಷಗಾನ ಇವುಗಳ ಪ್ರಾಮುಖ್ಯತೆಯನ್ನು ಮಕ್ಕಳಿಗೆ ವಿವರಿಸಲಾಯಿತು.

ಒಟ್ಟಾರೆ ಇಂದಿನ ನಾಗಾಲೋಟದ ಪ್ರಪಂಚದಲ್ಲಿ ಹೊಸತನ್ನು ಅನುಭವಿಸುತ್ತಾ ಹಳೆಯದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುತ್ತಾ ವಿದ್ಯಾರ್ಜನೆ ಮಾಡುವುದು ಈ ಸಂಸ್ಥೆಯ ವಿಶೇಷ. ಈ ಸಂದರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ರಾಘವೇಂದ್ರ ಬಿ ರಾವ್‌, ಉಮೇಶ್‌, ಚಂದ್ರಕಾಂತ್‌, ರಾಜೇಶ್‌ ಶೆಟ್ಟಿ, ಅಕ್ಷತಾ ಜೈನ್‌ ಹಾಗೂ ಭೋಧಕೇತರ ವೃಂದದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...