Friday, March 20, 2026
Friday, March 20, 2026

ರಷ್ಯ ದೇಶವು ವಿಶ್ವವನ್ನು ಪರಮಾಣು ದುರಂತದ ಅಂಚಿಗೆ ತಂದಿದೆ- ಝೆಲೆನ್ಸ್ಕಿ

Date:

ರಷ್ಯಾವನ್ನು ಈಗಲೇ ತಡೆದು ನಿಲ್ಲಿಸದಿದ್ದರೆ ಆ ದೇಶದ ಕೊಲೆಗಾರರು ಖಂಡಿತಾ ಇತರ ದೇಶಗಳತ್ತ ಕಣ್ಣು ಹಾಕುತ್ತಾರೆ. ಉಕ್ರೇನ್ ಮೇಲಿನ ಆಕ್ರಮಣದ ಸಂದರ್ಭ ನಡೆದಿರುವ ಅಪರಾಧ ಕೃತ್ಯಗಳಿಗೆ ರಷ್ಯಾವನ್ನು ಹೊಣೆಗಾರರನ್ನಾಗಿಸಲು ಅಂತರಾಷ್ಟ್ರೀಯ ಸಮುದಾಯ ಮತ್ತು ವಿಶ್ವಸಂಸ್ಥೆ ಕ್ರಮ ಕೈಗೊಳ್ಳಬೇಕು ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಅವರು ಆಗ್ರಹಿಸಿದ್ದಾರೆ.

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್ ಭೂಪ್ರದೇಶದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸಲಾಗುತ್ತದೆ. ನಮ್ಮ ಸ್ವಾತಂತ್ರ್ಯವು ನಿಮ್ಮ ಭದ್ರತೆಯಾಗಿದೆ ಎಂದರು.

ಝಪೋರಿಝಿಯ ಅಣುವಿದ್ಯುತ್ ಸ್ಥಾವರವನ್ನು ಯುದ್ಧವಲಯನ್ನಾಗಿ ಪರಿವರ್ತಿಸುವ ಮೂಲಕ ರಶ್ಯವು ವಿಶ್ವವನ್ನು ಪರಮಾಣು ದುರಂತದ ಅಂಚಿಗೆ ತಂದು ನಿಲ್ಲಿಸಿದೆ.

ಚೆರ್ನೋಬಿಲ್ನಲ್ಲಿ ಒಂದು ರಿಯಾಕ್ಟರ್ ಸ್ಫೋಟಿಸಿದಾಗ ಆಗಿದ್ದ ವಿಪತ್ತನ್ನು ಅಂತರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ ಮರೆಯಬಾರದು. ಝಪೋರಿಝಿಯದಲ್ಲಿ 6 ರಿಯಾಕ್ಟರ್ಗಳಿವೆ. ಆದ್ದರಿಂದ ಐಎಇಎ ತಕ್ಷಣ ಇದನ್ನು ತನ್ನ ನಿಯಂತ್ರಣಕ್ಕೆ ಪಡೆಯಬೇಕು. ರಶ್ಯವು ಇಲ್ಲಿ ಪರಮಾಣು ಬ್ಲಾಕ್ಮೇಲ್ ನಡೆಸುವುದನ್ನು ಬಿಟ್ಟು ಕೂಡಲೇ ಹಿಂದೆ ಸರಿಯಬೇಕು ಎಂದು ಝೆಲೆನ್ಸ್ಕಿ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...