Monday, February 2, 2026
Monday, February 2, 2026

ಈದ್ಗ ಮೈದಾನ ಯಥಾಸ್ಥಿತಿ ಕಾಪಾಡಿ-ಹೈಕೋರ್ಟ್ ಸೂಚನೆ

Date:

ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳು ವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಆಟದ ಮೈದಾನವಾಗಿ ಬಳಸಬೇಕು ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ರಂಜಾನ್, ಬಕ್ರೀದ್ ಸಂದರ್ಭದಲ್ಲಿ ಮಾತ್ರ ಪ್ರಾರ್ಥನೆಗೆ ಬಳಸಲು ಅನುಮತಿ ಇದೆ. ಆದರೆ, ಶುಕ್ರವಾರದ ಪ್ರಾರ್ಥನೆಗೆ ಅವಕಾಶ ಇಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಮುಂದಿನ ಆದೇಶದವರೆಗೂ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚಿಸಿದೆ. ಯಾವುದೇ ವಿವಾದಕ್ಕೆ ಆಸ್ಪದ ಮಾಡಿಕೊಡಬೇಡಿ. ಮೈದಾನವಾಗಿರುವುದರಿಂದ ಯಥಾಸ್ಥಿತಿ ಕಾಪಾಡಿ ಎಂದು ಸರ್ಕಾರಕ್ಕೆ ಪೀಠ ಸೂಚನೆ ನೀಡಿದೆ. ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಆದೇಶ ನೀಡಿದೆ.

ಈದ್ಗಾ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೈದಾನವನ್ನು ಆಟಕ್ಕೆ ಬಳಸಬಹುದು. ಶುಕ್ರವಾರದ ಪ್ರಾರ್ಥನೆಗೆ ಅವಕಾಶ ಇಲ್ಲ. ರಂಜಾನ್ ಮತ್ತು ಬಕ್ರೀದ್ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಇದೆ. ಇದನ್ನು ಹುಬ್ಬಳ್ಳಿ ಈದ್ಗಾ ಮೈದಾನದ ರೀತಿಯಲ್ಲಿ ಮಾಡಬೇಡಿ ಎಂದು ತಿಳಿಸಿದೆ.

ಅಲ್ಲದೇ, ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡುವುದಕ್ಕೆ ಯಾವುದೇ ಅನುಮತಿ ಬೇಕಿಲ್ಲ ಎಂದು ಅಭಿಪ್ರಾಯಪಟ್ಟಿದೆ.ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...