Friday, April 3, 2026
Friday, April 3, 2026

ದಡ್ಡನೆಂದು ಕರೆದುಕೊಂಡ ದೊಡ್ಡ ಕವಿ

Date:

ಯುಗಧರ್ಮ ರಾಮಣ್ಣ ಇವರು ಯುಗಧರ್ಮ ಎಂಬ ಅಂಕಿತದಿಂದ ಸಾವಿರಾರು ತ್ರಿಪದಿಗಳು ಹಾಗೂ ಲಾವಣಿಗಳನ್ನು ಬರೆದಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಸಿದ್ದನಮಠ ಗ್ರಾಮದವರಾದ ರಾಮಣ್ಣ ಅನಕ್ಷರಸ್ಥ ಕವಿ. ಇವರು ಅನಕ್ಷರಸ್ಥರಾದರೂ ಸರಸ್ವತಿ ಇವರ ನಾಲಿಗೆ ಮೇಲೆ ನಲಿದಾಡುತ್ತಿದ್ದಾಳೆ. ಬಾಲ್ಯದಲ್ಲಿ ಎಮ್ಮೆ ಕಾಯಲು ಹೋಗುತ್ತಿದ್ದರು.ರಾಮಣ್ಣನಿಗೆ ನಾಟಕದ ಹುಚ್ಚು. ನಾಟಕದಲ್ಲಿ ಅಭಿನಯ ಮಾಡುತ್ತಿದ್ದರೆ ಇವರ ಪಾತ್ರವನ್ನು ನೋಡಲು ಜನರೆಲ್ಲಾ ಕಾತರದಿಂದ ಕಾಯುತ್ತಿದ್ದರು. ಅದೊಂದು ದಿನ ರಾಮಣ್ಣ ಗೆಳೆಯರ ಜೊತೆ ಮರದ ಕೆಳಗೆ ಕೂತು ಮಾತನಾಡುತ್ತಿದ್ದರು.ಆಗ ಅದೇನೋ ಮಿಂಚಿನ ಹಾಗೆ ಪ್ರಭೆಯೊಂದು ಬಂದು ಅವರ ತಲೆ ಒಳಗೆ ಹೋದಂತೆ ಆಯ್ತಂತೆ. ಆಗ ರಾಮಣ್ಣನ ತಲೆಯಲ್ಲಿ ಕೂಡಲೇ ಒಂದು ತ್ರಿಪದಿ ಬಂತಂತೆ. ಅದು ಅವರ ಮೊದಲ ತ್ರಿಪದಿ. “ರಾಜಕೀಯಕ್ಕೆ ಇಳಿಯದೆ ಸೋಜಾಗಿ ಇರುವವನು ಗೀಜಗದ ಗೂಡು ಇದ್ದಂತೆ ಅವನ ಬಾಳು ಮೋಜಾಗಿ ಇರುವುದೋ ಯುಗಧರ್ಮ” ಯುಗಧರ್ಮ, ಯುಗಧರ್ಮನ ತ್ರಿಪದಿಗಳು, ತೋಚಿದ್ಗೀಚು, ವಚನ ಧರ್ಮ ಎಂಬ ಪುಸ್ತಕಗಳು ಹೊರಬಂದಿದೆ. ಇವರ ಲಾವಣಿ ಸಂಗ್ರಹಿಸಿ ಶಿವಮೊಗ್ಗದ ಯುವರಾಜ್ ಕ್ಯಾಸೆಟ್ ಕೂಡ ಮಾಡಿದ್ದಾರೆ. ದಡ್ಡರ ಪದ ವಿಶ್ವವಿದ್ಯಾಲಯ ಎಂಬ ಯೋಜನೆಯನ್ನು ಹಾಕಿಕೊಂಡಿದ್ದಾರೆ.ಅಲ್ಲಿ ನಮ್ಮ ಗ್ರಾಮೀಣ ಕಲೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ಯೋಜನೆ ಅವರದ್ದು. ರಾಮಣ್ಣ ಯಾವತ್ತೂ ತನ್ನನ್ನು ತಾನು ಎಂದೂ ಹೊಗಳಿಕೊಳ್ಳುವುದಿಲ್ಲ. ತನ್ನನ್ನೇ ತಾನು ಮಂಗ ಎಂದು ಹೇಳಿಕೊಳ್ಳುತ್ತಾರೆ. ಈ ಮಂಗ ಒಮ್ಮೆ ಬೆಂಗಳೂರಿಗೆ ಹೋಗಿತ್ತು, ಕಳ್ಳಿ ಸಾಲಲ್ಲಿ, ಕೊಳ್ಳಿ ಬೆಳಕಲ್ಲಿ, ತೆಳ್ಳನೆ ರಾಗಿ ಅಂಬಲಿ ಕುಡಿದು ಬೆಳೆದ ಮಂಗ ಇದು….. ಹೀಗೆ ತಮ್ಮ ಬಗ್ಗೆ ತಾವು ಹೇಳಿಕೊಳ್ಳುತ್ತಾರೆ. ಇವರು ಈ ಹಿಂದೆ ಚನ್ನಗಿರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅನಕ್ಷರಸ್ಥ ಕವಿಯೊಬ್ಬ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಆಗಿರುವ ಇತಿಹಾಸ ರಾಜ್ಯದಲ್ಲಿ ಇದೇ ಮೊದಲು. ಕನ್ನಡದ ತೇರ ಕಟ್ಟೋಣ ಬನ್ನಿ ಎಂಬ ರಚನೆ ಬಹಳ ವೈಶಿಷ್ಟ್ಯದಿಂದ ಕೂಡಿದೆ‌‌. ಜಾತ್ರೆಯ ತೇರನ್ನ ವಿವಿಧವಾಗಿ ಅಲಂಕರಿಸಿ ಆನಂದಿಸುತ್ತೆವೆ. ತೇರಿನ ಪ್ರತಿ ವಿನ್ಯಾಸಕ್ಕೂ ಬಹುತೇಕ ಕನ್ನಡದ ಎಲ್ಲಾ ಕವಿಗಳ ಹೆಸರನ್ನ ಸಮೀಕರಿಸಿ ಪದ ಕಟ್ಟಿರುವ ಜಾಣ್ಮೆ ರಾಮಣ್ಣ ಅವರದ್ದು. ಅವರೇ ಹಾಡಿರುವ ತೇರ ಕಟ್ಟೊಣ ಬನ್ನಿ ಎಂಬ ಹಾಡಿನಲ್ಲಿ ಜಾನಪದ ಸೊಗಡಿದೆ. ( ಪರಿಚಯ ಮಾಹಿತಿ : ಶ್ರೀ ರಾಮಚಂದ್ರ ನಾಡಿಗ್ . ಪತ್ರಕರ್ತರು , ಶಿವಮೊಗ್ಗ)SHOW LESS

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...