Sunday, December 7, 2025
Sunday, December 7, 2025

‘ಪಂಪ’ನ ಬನವಾಸಿಯಲ್ಲಿ ರಾಜ್ಯೋತ್ಸವ ವೈಭವ

Date:

ಬನವಾಸಿ , ಉತ್ತರ ಕನ್ನಡ

ಬನವಾಸಿ ಎಂದಾಕ್ಷಣ ಕನ್ನಡಿಗರ ಕಣ್ಮನದಲ್ಲಿ ನಿಲ್ಲುವುದು ಕನ್ನಡದ ಆದಿಕವಿ ಪಂಪನ ಚಿತ್ರ. “ಆರಂಕುಸವಿಟ್ಟೊಡಂ, ನೆನೆವುದೆನ್ನ ಮನಂ ಬನವಾಸಿ ದೇಶಮಂ” ಇದು ಪಂಪನ ಕಾವ್ಯದ ಪ್ರಖ್ಯಾತ ಸಾಲು. ಬನವಾಸಿ ಕದಂಬರ ಮೂಲ ಸ್ಥಳ ಹಾಗೂ ರಾಜಧಾನಿ. ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಕನ್ನಡ ರಾಜ್ಯೋತ್ಸವವು ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ಮಕ್ಕಳು, ಕಿತ್ತೂರು ರಾಣಿ ಚೆನ್ನಮ್ಮ, ಡಾಕ್ಟರ್ ಬಿ.ಆರ್ ಅಂಬೇಡ್ಕರ್, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಸೇರಿದಂತೆ ಹಲವಾರು ದೇಶಭಕ್ತರ ಹಾಗೂ ಮಹಾನ್ ವ್ಯಕ್ತಿಗಳ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಯಕ್ಷಗಾನ, ಡೊಳ್ಳುಕುಣಿತ ಸೇರಿದಂತೆ ಮುಂತಾದ ಮಾತುಗಳಿಂದ ಕೂಡಿದ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...