Thursday, June 25, 2026
Thursday, June 25, 2026

ರಾಜಿನಾಮೆ ನೀಡಿ ನೇರಾನೇರ ರಾಹುಲ್ ಬಗ್ಗೆ ಟೀಕಿಸಿದ ಗುಲಾಂ ನಬೀ ಆಜಾದ್

Date:

ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿನ ನಡೆಗಳ ಬಗ್ಗೆ ತುಂಬಾ ದಿನಗಳ ಹಿಂದೆಯೇ ಕೋಪಿಸಿಕೊಂಡಿದ್ದ ಆಜಾದ್, ಇಂದು ಪಕ್ಷದ ಎಲ್ಲಾ ಸ್ಥಾನ-ಮಾನಗಳಿಗೂ ರಾಜೀನಾಮೆ ಘೋಷಿಸಿದ್ದಾರೆ. ರಾಜೀನಾಮೆ ನೀಡಿ ಹಂಗಾಮಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಗೆ 4 ಪುಟಗಳ ಸುದೀರ್ಘ ಪತ್ರವನ್ನ ಬರೆದು, ರಾಹುಲ್ ಗಾಂಧಿ ವಿರುದ್ಧ ನೇರ ಅಸಮಾಧಾನ ಹೊರಹಾಕಿದ್ದಾರೆ.

ರಾಹುಲ್ ಬಾಲೀಶ ವರ್ತನೆಗೆ ಕಿಡಿ
ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಬಾಲೀಶ ವರ್ತನೆ ಮಾಡುತ್ತಾರೆ ಎಂದು ಆಜಾದ್ ಆರೋಪಿಸಿದ್ದಾರೆ. 2014ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್​ ‘ಬಿಕ್ಕಟ್ಟಿನ ಪರಿಸ್ಥಿತಿ’ಗೆ ರಾಹುಲ್ ಗಾಂಧಿಯೇ ನೇರ ಕಾರಣ. 2013ರ ಜನವರಿಯಲ್ಲಿ ರಾಹುಲ್ ಗಾಂಧಿಯನ್ನ ನೀವು ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ಮಾಡಿದ್ದೀರಿ. ಅವರು ಪಕ್ಷದಲ್ಲಿನ ಸಮಾಲೋಚನೆಯ ವ್ಯವಸ್ಥೆಯನ್ನು ಕೊನೆಗೊಳಿಸಿದರು. ಎಲ್ಲಾ ಹಿರಿಯ, ಅನುಭವಿ ನಾಯಕರನ್ನು ಬದಿಗೊತ್ತಿ, ಅನುಭವವೇ ಇಲ್ಲದವರು ಪಕ್ಷವನ್ನು ನಡೆಸತೊಡಗಿದರು.

ಹೀಗಿರುವಾಗ ಪಕ್ಷ ‘ಭಾರತ್ ಜೋಡೋ’ ಯಾತ್ರೆಯನ್ನ ಮಾಡಲು ಮುಂದಾಗಿದೆ. ‘ಭಾರತ್ ಜೋಡೋ’ ಬದಲಾಗಿ ‘ಕಾಂಗ್ರೆಸ್​ ಜೋಡೋ’ ಮಾಡಿ ಎಂದು ರಾಹುಲ್ ಗಾಂಧಿಗೆ ಕಿವಿ ಮಾತು ಹೇಳಿದ್ದಾರೆ. ಸೆಪ್ಟೆಂಬರ್ 7 ರಿಂದ ಕಾಂಗ್ರೆಸ್​ ‘ಭಾರತ್ ಜೋಡೋ’ ಯಾತ್ರೆಯನ್ನ ಮಾಡ್ತಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್ ಜೋಡೋ ಯಾತ್ರೆ ನಡೆಯಲಿದೆ. 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಈ ಯಾತ್ರೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...