Sunday, February 1, 2026
Sunday, February 1, 2026

ಕೇಂದ್ರ ಸರ್ಕಾರದಿಂದ ಭಾರತ್ ಬ್ರಾಂಡ್ ಅಡಿಯಲ್ಲಿ ರಸಗೊಬ್ಬರ ಮಾರಾಟ

Date:

ಯೂರಿಯಾ, ಡಿಎಪಿ ಸೇರಿದಂತೆ ಸಬ್ಸಿಡಿ ಇರುವ ಎಲ್ಲ ರಸಗೊಬ್ಬರಗಳನ್ನು ಅಕ್ಟೋಬರ್‌ನಿಂದ ‘ಭಾರತ್’ ಬ್ರ್ಯಾಂಡ್‌ ಅಡಿಯಲ್ಲಿ ಮಾರಾಟ ಮಾಡಲಾಗುತ್ತದೆ. ರಸಗೊಬ್ಬರಗಳು ರೈತರಿಗೆ ಸಕಾಲದಲ್ಲಿ ಸಿಗಬೇಕು, ಇವುಗಳ ಸಾಗಾಟದ ಮೇಲಿನ ಸಬ್ಸಿಡಿ ತಗ್ಗಿಸಬೇಕು ಎಂಬ ಉದ್ದೇಶ ಇದರ ಹಿಂದಿದೆ.

ರಸಗೊಬ್ಬರ ಸಬ್ಸಿಡಿ ಯೋಜನೆ ‘ಪ್ರಧಾನಮಂತ್ರಿ ಭಾರತೀಯ ಜನಉರ್ವರಕ್‌ ಪರಿಯೋಜನಾ’ (ಪಿಎಂಬಿಜೆಪಿ) ಅಡಿಯಲ್ಲಿ ಜಾರಿಗೆ ತರುತ್ತಿರುವ ‘ಒಂದು ದೇಶ ಒಂದು ರಸಗೊಬ್ಬರ’ ಎಂಬ ಹೊಸ ಉಪಕ್ರಮದ ಬಗ್ಗೆ ಮಾಹಿತಿ ನೀಡಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಮನಸುಖ್ ಮಾಂಡವೀಯ ಅವರು, ‘ಕಂಪನಿಗಳು ತಮ್ಮ ಬ್ರ್ಯಾಂಡ್‌, ಹೆಸರು, ಲೋಗೊ ಮತ್ತು ಉತ್ಪನ್ನಕ್ಕೆ ಸಂಬಂಧಿಸಿದ ಇತರ ಅಗತ್ಯ ವಿವರಗಳನ್ನು ಚೀಲದ ಮೂರನೆಯ ಒಂದರಷ್ಟು ಭಾಗದಲ್ಲಿ ಪ್ರದರ್ಶಿಸಬಹುದು’ ಎಂದು ತಿಳಿಸಿದ್ದಾರೆ.

ಇನ್ನುಳಿದ ಮೂರನೆಯ ಎರಡರಷ್ಟು ಭಾಗದಲ್ಲಿ ಕಂಪನಿಗಳು ‘ಭಾರತ್‌’ ಬ್ರ್ಯಾಂಡ್ ಹಾಗೂ ಪಿಎಂಬಿಜೆಪಿ ಲೋಗೊ ಪ್ರದರ್ಶಿಸಬೇಕಾಗುತ್ತದೆ. ಹಳೆಯ ದಾಸ್ತಾನು ಖಾಲಿ ಮಾಡಲು ಕಂಪನಿಗಳಿಗೆ ವರ್ಷಾಂತ್ಯದವರೆಗೆ ಅವಕಾಶ ಇದೆ.

ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ರಸಗೊಬ್ಬರಗಳಿಗೆ ಸಬ್ಸಿಡಿ ನೀಡಲು ₹ 1.62 ಲಕ್ಷ ಕೋಟಿ ವ್ಯಯಿಸಿದೆ. ಕಳೆದ ಆರು ತಿಂಗಳಲ್ಲಿ ಜಾಗತಿಕ ಮಟ್ಟದಲ್ಲಿ ಆಗಿರುವ ಬೆಲೆ ಏರಿಕೆ ಗಮನಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರ ನೀಡಬೇಕಿರುವ ಸಬ್ಸಿಡಿ ಮೊತ್ತವು ₹ 2.25 ಲಕ್ಷ ಕೋಟಿ ಆಗುವ ಸಾಧ್ಯತೆ ಇದೆ.

ಬೇರೆ ಬೇರೆ ಕಂಪನಿಗಳು ತಯಾರಿಸುವ ರಸಗೊಬ್ಬರಗಳು ಒಂದೇ ಆಗಿದ್ದರೂ, ರಸಗೊಬ್ಬರಗಳನ್ನು ಬೇರೆ ಬೇರೆ ಬ್ರ್ಯಾಂಡ್ ಅಡಿ ಬೇರೆ ಬೇರೆ ರಾಜ್ಯಗಳಲ್ಲಿ ತಯಾರಿಸಲಾಗುತ್ತಿದೆ. ರಸಗೊಬ್ಬರಗಳನ್ನು ತಯಾರಿಕಾ ಕೇಂದ್ರಗಳಿಂದ ಬಹುದೂರದ ಪ್ರದೇಶಗಳಿಗೆ ರವಾನೆ ಮಾಡಲಾಗುತ್ತಿದೆ. ಇದರಿಂದಾಗಿ ಸಾಗಣೆ ಸಬ್ಸಿಡಿ ಹೊರೆ ಕೇಂದ್ರದ ಮೇಲೆ ಬೀಳುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

‘ರಸಗೊಬ್ಬರ ತಯಾರಿಕಾ ಕಂಪನಿಗಳು ತಮ್ಮ ಉತ್ಪನ್ನಗಳನ್ನು ಸ್ಥಳೀಯವಾಗಿ ಮಾರಾಟ ಮಾಡುವಂತಾಗಲಿ, ಅನಗತ್ಯ ಸಾರಿಗೆ ಕೆಲಸ ಕಡಿಮೆಯಾಗಲಿ ಎಂಬುದು ಏಕ ಬ್ರ್ಯಾಂಡ್‌ ಜಾರಿಗೆ ತರುವುತ್ತಿರುವುದು ಹಿಂದಿನ ಉದ್ದೇಶ’ ಎಂದು ಹೇಳಿದ್ದಾರೆ.

ಏಕ ಬ್ರ್ಯಾಂಡ್‌ ವ್ಯವಸ್ಥೆ ಜಾರಿಗೆ ಬಂದ ನಂತರ, ಯಾವ ಬ್ರ್ಯಾಂಡ್‌ನ ರಸಗೊಬ್ಬರ ಖರೀದಿಸಬೇಕು ಎಂಬ ಗೊಂದಲವು ರೈತರಲ್ಲಿ ಮೂಡುವುದಿಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...