Sunday, August 23, 2026
Sunday, August 23, 2026

ರಾಜ್ಯದ ನೆರೆ ಸಂತ್ರಸ್ತರಿಗೆ ₹255 ಕೋಟಿ ಬಿಡುಗಡೆ- ಸಚಿವ ಅಶೋಕ್

Date:

ನೆರೆ ಸಂತ್ರಸ್ತರಿಗಾಗಿ ಕಂದಾಯ ಇಲಾಖೆಯಿಂದ 255 ಕೋಟಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್​.ಅಶೋಕ್ ಅವರು ತಿಳಿಸಿದ್ದಾರೆ.

ಮಳೆ ಹಾನಿ ಕುರಿತ ವರದಿ ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಅನದಾನ ಕೋರಿ ಮನವಿ ಸಲ್ಲಿಸಲಾಗುತ್ತೆ. ಎನ್​ಡಿಆರ್​​ಫ್ ಅಡಿ 1022.05 ಕೋಟಿ ಅನುದಾನ ಬರಬೇಕಿದೆ ಎಂದು ತಿಳಿಸಿದರು.

ಈಗಾಗಲೇ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ ನೀಡ್ತಿದ್ದಾರೆ. ಮಳೆಯಿಂದ ಮನೆಗಳಿಗೆ ಹಾನಿಯಾದರೆ ತಕ್ಷಣ ಪರಿಹಾರ ನೀಡಲಾಗುತ್ತದೆ. ರಾಜ್ಯದಲ್ಲಿ ಜೂನ್​ನಿಂದ ಈವರೆಗೂ ಮಳೆಯಿಂದ 96 ಜನ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯೊಳಗೆ ರಾಮನಗರ, ಬಳ್ಳಾರಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 992 ಮನೆಗಳು ಹಾನಿಯಾಗಿವೆ. 10, 274 ಅರ್ಧ ಮನೆ ಹಾನಿಯಾಗಿವೆ. ನಿನ್ನೆ ಒಂದೇ ದಿನದಲ್ಲಿ 148 ಮನೆಗಳು ಹಾನಿಯಾಗಿದ್ದು, 258 ಪಶುಗಳು ಸಾವನ್ನಪ್ಪಿವೆ ಎಂದು ಹೇಳಿದರು.

ರಾಜ್ಯದಲ್ಲಿ 820 ಮಿಲಿಮೀಟರ್ ಮಳೆಯಾಗಿದೆ. ದಾವಣಗೆರೆ, ತುಮಕೂರು, ವಿಜಯಪುರ, ಮೈಸೂರು, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ. ಒಟ್ಟು 27 ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಮಳೆಯಾಗಿದೆ. ರಾಮನಗರ, ಮಂಡ್ಯದಲ್ಲಿ 9 ಮಿಲಿಮೀಟರ್​ನಷ್ಟು ಮಳೆಯಾಗಿದೆ.

ಕಳೆದ 24 ಗಂಟೆಯಲ್ಲಿ 20 ಜಿಲ್ಲೆಯಲ್ಲಿ ಮಳೆ ಎಫೆಕ್ಟ್ ಆಗಿದೆ. 29, 967 ಜನರಿಗೆ ಸಮಸ್ಯೆ ಆಗಿದೆ. ಜುಲೈ ಮತ್ತು ಅಗಸ್ಟ್ ತಿಂಗಳಿನಲ್ಲಿ ಕೃಷಿ ಬೆಳೆ 3,100.83 ಹೆಕ್ಟೇರ್, ತೋಟಗಾರಿಕಾ ಬೆಳೆ 201.95 ಹೆಕ್ಟೇರ್, ಬಹುವಾರ್ಷಿಕ ಬೆಳೆ 265.51 ಹೆಕ್ಟೇರ್, ಮೆಕ್ಕಲು ಮತ್ತು ಕೃಷಿ ಭೂಮಿ 0.84 ಹೆಕ್ಟೇರ್ ಮತ್ತು ರೇಷ್ಮೆ ಬೆಳೆ 0.13 ಹೆಕ್ಟೇರ್​ನಷ್ಟು ಭೂಮಿ ನಾಶವಾಗಿದೆ. 467 ಜಾನುವಾರುಗಳು ಸಾವನ್ನಪ್ಪಿವೆ. 24,408 ಮನೆಗಳು ಹಾನಿಯಾಗಿವೆ. 22,734 ಕಿ.ಮೀ ರಸ್ತೆ ಹಾನಿಯಾಗಿದ್ದು, ಇದರಲ್ಲಿ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳು 4159 ಕಿ.ಮೀ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...