Thursday, February 5, 2026
Thursday, February 5, 2026

ಕ್ರಿಕೆಟ್ ತಡೆ ಗೋಡೆ ಈಗ ಮುಖ್ಯ ಕೋಚ್

Date:

ಭಾರತ ಕ್ರಿಕೆಟ್ ತಂಡಕ್ಕೆ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಇದೇ ತಿಂಗಳು ಭಾರತದಲ್ಲಿಯೇ
ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಾರ್ಯರಂಭ ಮಾಡಲಿದ್ದಾರೆ.
ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುವುದು ಬಹುದೊಡ್ಡ ಗೌರವ. ಇದಕ್ಕೆ ಪ್ರತಿಯಾಗಿ ಉತ್ತಮ ಕೆಲಸ ಮಾಡುವತ್ತ ಗಮನ ಹರಿಸುತ್ತೇನೆ. ಎಂದು ಕ್ರಿಕೆಟಿಗ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ದುಬೈನಲ್ಲಿ ಹೋದ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ನಡೆಯುವ ಸಂದರ್ಭದಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರು ದ್ರಾವಿಡ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದರು. ಕೋಚ್ ಹುದ್ದೆ ಸ್ವೀಕರಿಸಲು ದ್ರಾವಿಡ್ ಅವರನ್ನು ಮನವೊಲಿಸಿದರು.
2023ರ ಏಕದಿನ ವಿಶ್ವಕಪ್ ಟೂರ್ನಿಯ ವರೆಗೂ ಅವರು ಕೆಲಸ ಮಾಡಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ರೀಮತಿ ಸುಲಕ್ಷಣ ನಾಯ್ಕ, ಶ್ರೀ ಆರ್ ಪಿ ಸಿಂಗ್, ಅವರನ್ನ ಒಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು ಅವಿರೋಧವಾಗಿ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾ ತರಬೇತುದಾರರನ್ನಾಗಿ ಆಯ್ಕೆ ಮಾಡಿದೆ.
ಅವರಿಗೆ ನೀಡುವ ವಾರ್ಷಿಕ ಸಂಭಾವನೆ 10 ಕೋಟಿ ರೂಪಾಯಿಯಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...