Thursday, December 18, 2025
Thursday, December 18, 2025

ಕಾಂಗ್ರೆಸ್ ನಿಂದ 2ನೇ ಹಂತದ ಪಾದಯಾತ್ರೆ

Date:

ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾಲದಲ್ಲಿ ದೇಶಕ್ಕಾಗಿ ಪಕ್ಷ ನೀಡಿರುವ ನೀಡಿರುವ ಕೊಡುಗೆಗಳನ್ನು ಜನತೆಗೆ ತಿಳಿಸಲು ಕಲಬುರಗಿ ದಕ್ಷಿಣದಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರ 2ನೇ ಹಂತದ ಜನಜಾಗೃತಿ ಪಾದಯಾತ್ರೆ ಮುಂದುವರಿದಿದ್ದು, ನಗರದ ಕೊಟನೂರ ಡಿ ಗ್ರಾಮದಲ್ಲಿ ಹಲವಾರು ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲ ನೇತೃತ್ವದಲ್ಲಿನ ಕಾಂಗ್ರೆಸ್‌ ಪಕ್ಷದ ಪಾದಯಾತ್ರೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮುಖಂಡರಾದ ನೀಲಕಂಠರಾವ್‌ ಮೂಲಗೆ, ಚೇತನ ಗೋನಾಯಕ, ಲಿಂಗರಾಜ ಕಣ್ಣಿ, ಲಿಂಗರಾಜ ತಾರಫೈಲ್‌ ಹಾಗೂ ಇನ್ನಿತರರು ಪಾಲ್ಗೊಂಡು, ಕಾಂಗ್ರೆಸ್‌ ಪಕ್ಷದ ಕೊಡುಗೆಗಳನ್ನು ವಿವರಿಸಿದರು.

ಕೊಟನೂರ ಡಿ ಗ್ರಾಮದ ಪಾದಯಾತ್ರೆಯಲ್ಲಿ ಮುಖಂಡರಾದ ಮಹಾದೇವಪ್ಪ ಪಟೀಲ್‌, ಸಂತೋಷ ಪಾಟೀಲ, ಜಗ್ಗು ಸಿರಸಗಿ, ಸುನೀಲ ಗೌನಳ್ಳಿ, ಶ್ರೀಶೈಲ ಹೂಗಾರ, ಚೇತನ ಸಾವಳಗಿ, ಅಂಬರೀಶ ಜಾನಿ, ಮಲ್ಲಿಕಾರ್ಜುನ ಗುಡೂರ್‌ ಹಾಗೂ ಇತರರು ವಿವಿಧ ಪಕ್ಷಗಳನ್ನು ತೆರೆದು ಕಾಂಗ್ರೆಸ್‌ ಸೇರಿದರು. ಕಾಂಗ್ರೆಸ್‌ ಪಕ್ಷದ ಮುಖಂಡ, ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲರು ಕಾಂಗ್ರೆಸ್‌ ಧ್ವಜ ನೀಡಿ ಸ್ವಾಗತಿಸಿಕೊಂಡರು.

ಪಕ್ಷದ ಮುಖಂಡರಾದ ಗುಂಡಪ್ಪಾ ಲಂಡನಕರ್‌, ಲತಾ ರವಿ ರಾಠೊಡ್‌ ವಾಣಿಶ್ರೀ ಸಗರಕರ್‌, ಶೋಭಾ ಕಾಳೆ, ಅವಿನಾಶ ಭಾಸ್ಕರ ಹಾಗೂ ಪಕ್ಷದ ಹಿರಿಯ-ಕಿರಿಯ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಮಂಗಳವಾರ ಪಾದಯಾತ್ರೆಯು ಪಾಣೆಗಾಂವ, ನಾಗನಳ್ಳಿ, ಕೋಟನೂರ್‌, ಉದನೂರ್‌, ಹುಣಸಿಹಡಗಿಲ್‌, ಸುಲ್ತಾನಪುರ್‌, ನಾಗನಹಳ್ಳಿ ಗ್ರಾಮಗಳ ಮೂಲಕ ಸಾಗಿ ಬಂತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...