Thursday, May 7, 2026
Thursday, May 7, 2026

ಕಲಬುರ್ಗಿಯಲ್ಲಿಕಾಂಗ್ರೆಸ್ 2ನೇ ಹಂತದ ಜನಜಾಗೃತಿಪಾದಯಾತ್ರೆ

Date:

ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾಲದಲ್ಲಿ ದೇಶಕ್ಕಾಗಿ ಪಕ್ಷ ನೀಡಿರುವ ನೀಡಿರುವ ಕೊಡುಗೆಗಳನ್ನು ಜನತೆಗೆ ತಿಳಿಸಲು ಕಲಬುರಗಿ ದಕ್ಷಿಣದಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರ 2ನೇ ಹಂತದ ಜನಜಾಗೃತಿ ಪಾದಯಾತ್ರೆ ಮುಂದುವರಿದಿದ್ದು, ನಗರದ ಕೊಟನೂರ ಡಿ ಗ್ರಾಮದಲ್ಲಿ ಹಲವಾರು ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲ ನೇತೃತ್ವದಲ್ಲಿನ ಕಾಂಗ್ರೆಸ್‌ ಪಕ್ಷದ ಪಾದಯಾತ್ರೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮುಖಂಡರಾದ ನೀಲಕಂಠರಾವ್‌ ಮೂಲಗೆ, ಚೇತನ ಗೋನಾಯಕ, ಲಿಂಗರಾಜ ಕಣ್ಣಿ, ಲಿಂಗರಾಜ ತಾರಫೈಲ್‌ ಹಾಗೂ ಇನ್ನಿತರರು ಪಾಲ್ಗೊಂಡು, ಕಾಂಗ್ರೆಸ್‌ ಪಕ್ಷದ ಕೊಡುಗೆಗಳನ್ನು ವಿವರಿಸಿದರು.

ಕೊಟನೂರ ಡಿ ಗ್ರಾಮದ ಪಾದಯಾತ್ರೆಯಲ್ಲಿ ಮುಖಂಡರಾದ ಮಹಾದೇವಪ್ಪ ಪಟೀಲ್‌, ಸಂತೋಷ ಪಾಟೀಲ, ಜಗ್ಗು ಸಿರಸಗಿ, ಸುನೀಲ ಗೌನಳ್ಳಿ, ಶ್ರೀಶೈಲ ಹೂಗಾರ, ಚೇತನ ಸಾವಳಗಿ, ಅಂಬರೀಶ ಜಾನಿ, ಮಲ್ಲಿಕಾರ್ಜುನ ಗುಡೂರ್‌ ಹಾಗೂ ಇತರರು ವಿವಿಧ ಪಕ್ಷಗಳನ್ನು ತೆರೆದು ಕಾಂಗ್ರೆಸ್‌ ಸೇರಿದರು. ಕಾಂಗ್ರೆಸ್‌ ಪಕ್ಷದ ಮುಖಂಡ, ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲರು ಕಾಂಗ್ರೆಸ್‌ ಧ್ವಜ ನೀಡಿ ಸ್ವಾಗತಿಸಿಕೊಂಡರು.

ಪಕ್ಷದ ಮುಖಂಡರಾದ ಗುಂಡಪ್ಪಾ ಲಂಡನಕರ್‌, ಲತಾ ರವಿ ರಾಠೊಡ್‌ ವಾಣಿಶ್ರೀ ಸಗರಕರ್‌, ಶೋಭಾ ಕಾಳೆ, ಅವಿನಾಶ ಭಾಸ್ಕರ ಹಾಗೂ ಪಕ್ಷದ ಹಿರಿಯ-ಕಿರಿಯ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಮಂಗಳವಾರ ಪಾದಯಾತ್ರೆಯು ಪಾಣೆಗಾಂವ, ನಾಗನಳ್ಳಿ, ಕೋಟನೂರ್‌, ಉದನೂರ್‌, ಹುಣಸಿಹಡಗಿಲ್‌, ಸುಲ್ತಾನಪುರ್‌, ನಾಗನಹಳ್ಳಿ ಗ್ರಾಮಗಳ ಮೂಲಕ ಸಾಗಿ ಬಂತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...