Sunday, March 22, 2026
Sunday, March 22, 2026

ಕಲಬುರ್ಗಿಯಲ್ಲಿಕಾಂಗ್ರೆಸ್ 2ನೇ ಹಂತದ ಜನಜಾಗೃತಿಪಾದಯಾತ್ರೆ

Date:

ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾಲದಲ್ಲಿ ದೇಶಕ್ಕಾಗಿ ಪಕ್ಷ ನೀಡಿರುವ ನೀಡಿರುವ ಕೊಡುಗೆಗಳನ್ನು ಜನತೆಗೆ ತಿಳಿಸಲು ಕಲಬುರಗಿ ದಕ್ಷಿಣದಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರ 2ನೇ ಹಂತದ ಜನಜಾಗೃತಿ ಪಾದಯಾತ್ರೆ ಮುಂದುವರಿದಿದ್ದು, ನಗರದ ಕೊಟನೂರ ಡಿ ಗ್ರಾಮದಲ್ಲಿ ಹಲವಾರು ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲ ನೇತೃತ್ವದಲ್ಲಿನ ಕಾಂಗ್ರೆಸ್‌ ಪಕ್ಷದ ಪಾದಯಾತ್ರೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮುಖಂಡರಾದ ನೀಲಕಂಠರಾವ್‌ ಮೂಲಗೆ, ಚೇತನ ಗೋನಾಯಕ, ಲಿಂಗರಾಜ ಕಣ್ಣಿ, ಲಿಂಗರಾಜ ತಾರಫೈಲ್‌ ಹಾಗೂ ಇನ್ನಿತರರು ಪಾಲ್ಗೊಂಡು, ಕಾಂಗ್ರೆಸ್‌ ಪಕ್ಷದ ಕೊಡುಗೆಗಳನ್ನು ವಿವರಿಸಿದರು.

ಕೊಟನೂರ ಡಿ ಗ್ರಾಮದ ಪಾದಯಾತ್ರೆಯಲ್ಲಿ ಮುಖಂಡರಾದ ಮಹಾದೇವಪ್ಪ ಪಟೀಲ್‌, ಸಂತೋಷ ಪಾಟೀಲ, ಜಗ್ಗು ಸಿರಸಗಿ, ಸುನೀಲ ಗೌನಳ್ಳಿ, ಶ್ರೀಶೈಲ ಹೂಗಾರ, ಚೇತನ ಸಾವಳಗಿ, ಅಂಬರೀಶ ಜಾನಿ, ಮಲ್ಲಿಕಾರ್ಜುನ ಗುಡೂರ್‌ ಹಾಗೂ ಇತರರು ವಿವಿಧ ಪಕ್ಷಗಳನ್ನು ತೆರೆದು ಕಾಂಗ್ರೆಸ್‌ ಸೇರಿದರು. ಕಾಂಗ್ರೆಸ್‌ ಪಕ್ಷದ ಮುಖಂಡ, ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲರು ಕಾಂಗ್ರೆಸ್‌ ಧ್ವಜ ನೀಡಿ ಸ್ವಾಗತಿಸಿಕೊಂಡರು.

ಪಕ್ಷದ ಮುಖಂಡರಾದ ಗುಂಡಪ್ಪಾ ಲಂಡನಕರ್‌, ಲತಾ ರವಿ ರಾಠೊಡ್‌ ವಾಣಿಶ್ರೀ ಸಗರಕರ್‌, ಶೋಭಾ ಕಾಳೆ, ಅವಿನಾಶ ಭಾಸ್ಕರ ಹಾಗೂ ಪಕ್ಷದ ಹಿರಿಯ-ಕಿರಿಯ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಮಂಗಳವಾರ ಪಾದಯಾತ್ರೆಯು ಪಾಣೆಗಾಂವ, ನಾಗನಳ್ಳಿ, ಕೋಟನೂರ್‌, ಉದನೂರ್‌, ಹುಣಸಿಹಡಗಿಲ್‌, ಸುಲ್ತಾನಪುರ್‌, ನಾಗನಹಳ್ಳಿ ಗ್ರಾಮಗಳ ಮೂಲಕ ಸಾಗಿ ಬಂತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...