Thursday, August 6, 2026
Thursday, August 6, 2026

ಸ್ವಾತಂತ್ರ್ಯದ ಚಳವಳಿಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ವಿಶೇಷ ಕಾರ್ಯಕ್ರಮ

Date:

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ. ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಕುರಿತು ಉಪನ್ಯಾಸ ಮಾಲಿಕೆ ನಿರಂತರವಾಗಿ ಜಿಲ್ಲೆಯ ಪದವಿ, ಪದವಿ ಪೂರ್ವ ಕಾಲೇಜು ಗಳಲ್ಲಿ ನಡೆಸಿದ ಉಪನ್ಯಾಸ ಮಾಲಿಕೆಯ ಸಮಾರೋಪ ಸಮಾರಂಭ ಆಗಸ್ಟ್ 29 ರಂದು ಶಿವಮೊಗ್ಗದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆಯಿತು.

ಜಿಲ್ಲಾ ಕಸಾಪ, ಕಸಾಸಾಂ ವೇದಿಕೆ ಅಧ್ಯಕ್ಷರಾದ ಡಿ. ಮಂಜುನಾಥ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಡಾ. ಕಲೀಮ್ ಉಲ್ಲಾ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಮಹಿಳೆಯರ ಕೊಡುಗೆ ಕುರಿತು ಮಾತನಾಡಿದರು. ಡಾ. ಎಚ್. ಟಿ. ಕೃಷ್ಣಮೂರ್ತಿ ಅವರು ಸಮಾರೋಪ ಮಾತುಗಳನ್ನಾಡಿ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು.

ರಾಜ್ಯದ ಯಾವ ಜಿಲ್ಲೆಯಲ್ಲೂ ಯೋಚಿಸದೆಯಿರುವ ವಿಶಿಷ್ಠವಾದ ಕಾರ್ಯಕ್ರಮ ರೂಪಿಸಿದ ಡಿ. ಮಂಜುನಾಥ ಅವರನ್ನು ಅವಿಶ್ರಾಂತ ಅಧ್ಯಕ್ಷರು ಎಂದು ಅಭಿನಂದಿಸಿದರು. ಕಾಲೇಜು ಪ್ರಿನ್ಸಿಪಾಲ್ ಡಾ. ದುಗ್ಗಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು.

ಡಾ. ಚಿನ್ನಪ್ಪ ಸ್ವಾಗತಿಸಿದರು. ಉಪನ್ಯಾಸಕ ನವೀನ್ ಅವರು ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿನಿ ಗೌತಮಿ ಪ್ರಾರ್ಥನೆ ಹಾಡಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಸಾದ್ ವಂದಿಸಿದರು.

ಕು. ಸುಪ್ರಿಯಾ ನಿರೂಪಿಸಿದರು. ಸೋಮಿನಕಟ್ಟಿ, ಕುಬೇರಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...