Friday, December 5, 2025
Friday, December 5, 2025

ಮುರುಘಾಶ್ರೀಗಳ ಬಂಧನ:ಮಕ್ಕಳ ಮಾಹಿತಿ ಸಿಗದೇ ಪೋಷಕರು ಕಂಗಾಲು

Date:

ಮುರುಘಾಮಠದ ಶ್ರೀಗಳಾದ
ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಪೋಕ್ಸ್‌ ಪ್ರಕರಣ ದಾಖಲಾಗಿ ಸತತ ಆರು ದಿನಗಳ ಬಳಿಕ ಪೊಲೀಸರು ಮುರುಘಾ ಶರಣರನ್ನು ಬಂಧಿಸಿದ್ದಾರೆ.

ಇನ್ನು, -ಶ್ರೀಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ನ್ಯಾಯಧೀಶರು ಆದೇಶ ನೀಡುತ್ತಿದ್ದಂತೆ ಮುರುಘಾ ಶ್ರೀಗಳನ್ನ ಬಿಗಿ ಪೊಲೀಸರ ಭದ್ರತೆಯೊಂದಿಗೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶ್ರೀಗಳು ನಿದ್ದೆಯಿಲ್ಲದೆ ರಾತ್ರಿ ಪೂರ್ತಿ ಕಳೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ರಾತ್ರಿ ಮೂರು ಗಂಟೆ ಸುಮಾರಿಗೆ
ಶ್ರೀಗಳನ್ನ ಕೇಂದ್ರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿತ್ತು. ಆ ನಂತರ ಶ್ರೀಗಳು ನಿದ್ದೆಗೆ ಜಾರಿಲ್ಲ ರಾತ್ರಿಯಿಂದಲೂ ಬೇಸರದಲ್ಲೇ ಶ್ರೀಗಳು ಸಮಯವನ್ನು ಕಳೆದಿದ್ದಾರೆ ಈ ರೀತಿ ಆಯ್ತಲ್ಲ ಅಂತ ನೊಂದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ವಾಮೀಜಿಯವರು ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ಮೂಲಕ ದೂರು ನೀಡಿದ್ದರು. ಒಡನಾಡಿ ಸಂಸ್ಥೆಯ ನೆರವು ಪಡೆದು ಬಾಲಕಿಯರು ಆಗಸ್ಟ್ 26ರಂದು ಮೈಸೂರಿನಲ್ಲಿ ಕೇಸ್ ದಾಖಲು ಮಾಡಿದ್ದರು. ನಂತರ ಈ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಯಿತು. ಶ್ರೀಗಳ ಬಂಧನಕ್ಕೆ ಒತ್ತಾಯಿಸಿ ಹಲವು ಪ್ರತಿಭಟನೆ ಹಾಗೂ ಒತ್ತಡದಿಂದಾಗಿ ಪೊಲೀಸರು ಶ್ರೀಗಳನ್ನು ಬಂಧಿಸಿದ್ದಾರೆ.

ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮುರುಘಾ ಮಠದ ಹಾಸ್ಟೆಲ್ ನಲ್ಲಿ ಓದುತ್ತಿರುವ ಮಕ್ಕಳನ್ನು ಸಂಪರ್ಕಿಸಲು ಪೋಷಕರು ಪ್ರಯತ್ನ ನಡೆಸಿದ್ದಾರೆ.ಆದರೆ ಸೂಕ್ತ ಮಾಹಿತಿ ಇಲ್ಲದೇ ಕಂಗಾಲಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...