Saturday, December 6, 2025
Saturday, December 6, 2025

ನದಿ ವಿವಾದ ಪರಸ್ಪರ ಬಗೆಹರಿಸಿಕೊಳ್ಳಿ- ಅಮಿತ್ ಶಾ

Date:

ದಕ್ಷಿಣ ಭಾರತದಲ್ಲಿ ಹೆಚ್ಚಾಗಿರುವ ಅಂತಾರಾಜ್ಯ ನದಿ ವಿವಾದಗಳನ್ನು ಪರಸ್ಪರ ಮಾತುಕತೆ ಮುಖಾಂತರ ಬಗೆಹರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ದಕ್ಷಿಣ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ಕೇರಳ ರಾಜಧಾನಿ ತಿರುವನಂತಪುರದಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಜಲವಿವಾದ ಸಂಬಂಧ ಜಂಟಿಯಾಗಿ ಒಂದು ಪರಿಹಾರ ಸೂತ್ರ ಕಂಡುಕೊಳ್ಳಬೇಕು ಎಂದು ಅಮಿತ್ ಶಾ ಅವರು ತಿಳಿಸಿದ್ದಾರೆ.

ಈ ಸಭೆಯಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತಮಿಳುನಾಡಿನ ಎಂ.ಕೆ.ಸ್ಟಾಲಿನ್‌ ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳು ಉಪಸ್ಥಿತರಿದ್ದರು.

ಸದ್ಯ ಕಾವೇರಿ ವಿಚಾರದಲ್ಲಿ ಕರ್ನಾಟಕ-ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರ ಪ್ರದೇಶ ನಡುವೆ ಕೃಷ್ಣಾ ನದಿ ನೀರಿನ ಸಮಸ್ಯೆ ಇದೆ. ಈ ಸಭೆ ಕೇಂದ್ರಹಾಗೂ ರಾಜ್ಯಗಳ ನಡುವಿನ ತಿಕ್ಕಾಟ ಮತ್ತು ರಾಜ್ಯಗಳ ನಡುವಿನ ಸಮಸ್ಯೆ ಬಗೆಹರಿಸಿಕೊಳ್ಳಲು ವೇದಿಕೆಯಾಗಿದೆ ಎಂದು ಶಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...