Sunday, August 23, 2026
Sunday, August 23, 2026

ಜೆಡಿಎಸ್ ಗೆ 85 ರಿಂದ 90 ಸ್ಥಾನ ಗೆಲ್ಲಲಿದೆ- ಕುಮಾರಣ್ಣ

Date:

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 85ರಿಂದ 90 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಗಮಂಗಲ ತಾಲೂಕಿನ ಚಿಕ್ಕಜಕ್ಕನಹಳ್ಳಿ ಗ್ರಾಮದಲ್ಲಿ ಪಕ್ಷದ ಮುಖಂಡರೊಬ್ಬರ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ದೇಶ ಮತ್ತು ರಾಜ್ಯದಲ್ಲಿ ಜನವಿರೋಧಿ ಸರಕಾರಗಳು ಅಧಿಕಾರ ನಡೆಸುತ್ತಿವೆ. ಜನರು ಸಂಕಷ್ಟಗಳನ್ನು ಸರಕಾರಗಳು ಕೇಳುತ್ತಿಲ್ಲ. ಹಾಗಾಗಿ ಜನಪರ, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಸರಕಾರ ಬರಲು ಜೆಡಿಎಸ್‍ಗೆ ಮತ ಹಾಕಬೇಕು ಎಂದು ಅವರು ಮನವಿ ಮಾಡಿದರು.

ಜೆಡಿಎಸ್ ಸರಕಾರದ ಅಗತ್ಯವಿದೆ ಎಂದು ರಾಜ್ಯದಲ್ಲಿ ಜನತೆ ಚರ್ಚಿಸುತ್ತಿದ್ದಾರೆ.
ನಾವು ಹಿಂದಿನ ಚುನಾವಣೆಯಲ್ಲಿ ಜೆಡಿಎಸ್‍ಗೆ ಮತ ಹಾಕದೆ ತಪ್ಪು ಮಾಡಿದ್ದೇವೆ. ಈ ಚುನಾವಣೆಯಲ್ಲಿ ಜೆಡಿಎಸ್ ಸರಕಾರ ತರಬೇಕು ಎಂದು ಜನರು ಮಾತನಾಡಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅವರು ಹೇಳಿದರು.

ಮೋದಿ ಗೊಂಬೆ ಕುಣಿಸಲು ಬರುತ್ತಾರ?: ಪ್ರಧಾನಿ ನರೇಂದ್ರ ಮೋದಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಏಕೆ ಬರುತ್ತಾರೆ? ಇಲ್ಲಿ ಗೊಂಬೆ ಕುಣಿಸಲು ಬರುತ್ತಾರ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರಮೋದಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕಳೆದ ಮೂರು ವರ್ಷದಲ್ಲಿ ಸುಮಾರು 30ರಿಂದ 40 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಮೂಲ ಸೌಕರ್ಯಕ್ಕೆ ಹಾನಿಯಾಗಿದೆ. ಕೇಂದ್ರ ಸರಕಾರ ಯಾವುದೇ ಅನುದಾನ ನೀಡಿಲ್ಲ.ಇನ್ನೇಕೆ ರಾಜ್ಯಕ್ಕೆ ಮೋದಿ ಪದೇ ಪದೇ ಭೇಟಿ ನೀಡುತ್ತಾರೆ? ಎಂದು ತರಾಟೆಗೆ ತೆಗೆದುಕೊಂಡರು.
ರಾಜ್ಯದ ಜನತೆ ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರದಿಂದ ಯಾವುದೇ ನೆರವು ದೊರೆಯುತ್ತಿಲ್ಲ. ಮೋದಿ ಅವರು ಕರ್ನಾಟಕ ರಾಜ್ಯಕ್ಕೆ ಏನು ನೆರವು ಕೊಟ್ಟಿದ್ದೀವಿ ಎಂದು ಬರುತ್ತಾರೆ? ಜನರ ಸಮಸ್ಯೆಗೆ ಏನು ಮಾಡಿದ್ದೇನೆಂದು ಬರುತ್ತಾರೆ? ಕೇವಲ ಭಾಷಣ ಬಿಗಿಯಲು ಬರುತ್ತಾರ? ಎಂದು ಅವರು ಕಿಡಿಕಾರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...