Monday, August 24, 2026
Monday, August 24, 2026

ಸಂಕಷ್ಟದಲ್ಲಿ ಸಹಾಯ ನೀಡಿದ ಭಾರತಕ್ಕೆ ಬಾಂಗ್ಲಾಪ್ರಧಾನಿ ಶ್ಲಾಘನೆ

Date:

ರಷ್ಯಾ-ಉಕ್ರೇನ್ ಸಂಘರ್ಷದ ವೇಳೆ ಮತ್ತು ಕೋವಿಡ್ ಸಂಕಷ್ಟದ ಕಾಲದಲ್ಲಿ ನೆರವಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕ್ರಮವನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶ್ಲಾಘಿಸಿದ್ದಾರೆ.

ಸೋಮವಾರ ಭಾರತಕ್ಕೆ ಭೇಟಿ ನೀಡಲಿರುವ ಪ್ರಧಾನಿ ಹಸೀನಾ ಅವರು, ಕೊರೋನಾ ಸಾಂಕ್ರಾಮಿಕ ರೋಗ ವೇಗವಾಗಿ ಹರಡುತ್ತಿರುವಾಗ ಲಸಿಕೆ ಅಭಿಯಾನದಡಿ ನೆರೆಯ ದೇಶಗಳಿಗೆ ಕೋವಿಡ್-19 ಲಸಿಕೆ ಒದಗಿಸಿದ ನರೇಂದ್ರ ಮೋದಿ ಸರ್ಕಾರದ ನಡೆಯನ್ನೂ ಶ್ಲಾಘಿಸಿದ್ದಾರೆ.

ಉಭಯ ದೇಶಗಳ ನಡುವೆ ಭಿನ್ನಾಭಿಪ್ರಾಯಗಳಿರಬಹುದು, ಆದರೆ, ಇವುಗಳನ್ನು ಸಂವಾದದ ಮೂಲಕ ಪರಿಹರಿಸಿಕೊಳ್ಳಬೇಕು. ಭಾರತ ಮತ್ತು ಬಾಂಗ್ಲಾದೇಶಗಳು ಹಲವಾರು ಕ್ಷೇತ್ರಗಳಲ್ಲಿ ಅದನ್ನು ನಿಖರವಾಗಿ ಮಾಡಿದೆ ಎಂದು ಅವರು ಹೇಳಿದರು.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಸಮಯದಲ್ಲಿ ನಮ್ಮ ಅನೇಕ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ಈ ವೇಳೆ ಭಾರತವು ತನ್ನ ದೇಶ ವಿದ್ಯಾರ್ಥಿಗಳನ್ನು ಉಕ್ರೇನ್ ನಂದ ಸ್ಥಳಾಂತರಿಸಿದಾಗ ನಮ್ಮ ದೇಶದ ವಿದ್ಯಾರ್ಥಿಗಳನ್ನು ಕರೆತಂದರು. ಹೀಗಾಗಿ ನಮ್ಮ ವಿದ್ಯಾರ್ಥಿಗಳು ಮನೆಗೆ ಮರಳಿದ್ದಾರೆ. ನೀವು ಸ್ಪಷ್ಟವಾಗಿ ಸೌಹಾರ್ದ ಮನೋಭಾವವನ್ನು ತೋರಿದ್ದೀರಿ. ಈ ಉಪಕ್ರಮಕ್ಕಾಗಿ ನಾನು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಪ್ರಧಾನಿ ಹಸೀನಾ ಅವರು ಹೇಳಿದರು.

ಸಾರ್ಕ್ ರಾಷ್ಟ್ರಗಳ ನಡುವೆ ಸಹಕಾರದ ಕೊರತೆಯಿದೆ ಎಂದು ಪಾಶ್ಚಿಮಾತ್ಯ ವೀಕ್ಷಕರು ಆಗಾಗ್ಗೆ ಮಾಡುವ ಟೀಕೆಗಳ ಕುರಿತಾದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಭಾರತ ಸರ್ಕಾರದ ಲಸಿಕೆ ಮೈತ್ರಿ ಕಾರ್ಯಕ್ರಮದ ಕುರಿತು ಇದು ಪ್ರಧಾನಿ ಮೋದಿಯವರು ಕೈಗೊಂಡ ಅತ್ಯಂತ ವಿವೇಕಯುತ ಉಪಕ್ರಮ ಎಂದು ಹೇಳಿದರು.

ಪ್ರಧಾನಿ ಮೋದಿ ಬಾಂಗ್ಲಾದೇಶಕ್ಕೆ ಮಾತ್ರವಲ್ಲದೆ ಕೆಲವು ದಕ್ಷಿಣ ಏಷ್ಯಾದ ದೇಶಗಳಿಗೂ ಲಸಿಕೆಗಳನ್ನು ಕೊಡುಗೆ ನೀಡಿದ್ದಾರೆ. ಹಾಗೂ ಇದು ನಿಜವಾಗಿಯೂ ತುಂಬಾ ಸಹಾಯಕವಾಗಿದೆ. ಮತ್ತು ಇದು ನಿಜವಾಗಿಯೂ ವಿವೇಕಯುತ ಉಪಕ್ರಮವಾಗಿದೆ ಎಂದರು.

ಬಾಂಗ್ಲಾದೇಶವು ತನ್ನ ಜನಸಂಖ್ಯೆಯ ಶೇ.90 ರಷ್ಟು ಜನರಿಗೆ ಕೋವಿಡ್ -19 ಲಸಿಕೆಗಳನ್ನು ನೀಡಿದೆ. ನಮ್ಮ ದೇಶದ ಜನರು, ವಿಶೇಷವಾಗಿ ಗ್ರಾಮ ಮಟ್ಟದ ಜನರು, ಕೆಲವು ಪಟ್ಟಣಗಳಲ್ಲಿಯೂ ಸಹ, ನಾನು ಅನೇಕ ಜನರು ಲಸಿಕೆ ತೆಗೆದುಕೊಳ್ಳಲು ತುಂಬಾ ಹಿಂಜರಿಯುವುದನ್ನು ನಾನು ಕಂಡುಕೊಂಡಿದ್ದೇನೆ ಎಂದು ಅವರು ಹೇಳಿದರು.

ಭಾರತವನ್ನು ಉತ್ತಮ ಸ್ನೇಹಿತ ಎಂದು ಉಲ್ಲೇಖಿಸಿದ ಬಾಂಗ್ಲಾ ಪ್ರಧಾನಿ, ಭಾರತ ದೇಶವು ಬಾಂಗ್ಲಾದೇಶದ ಅಗತ್ಯದ ಯುದ್ಧದ ಸಮಯಗಳಾದ 1971 ಮತ್ತು 1975 ರಲ್ಲಿ ನೆರವು ನೀಡಿತು. 1975 ರಲ್ಲಿ ಆಗಿನ ಪ್ರಧಾನಿ ನಮಗೆ ಭಾರತದಲ್ಲಿ ಆಶ್ರಯ ನೀಡಿದರು. ನಾವು ಹತ್ತಿರದ ನೆರೆಹೊರೆಯವರು ಹಾಗೂ ನಾನು ಯಾವಾಗಲೂ ನಮ್ಮ ನೆರೆಯ ದೇಶಗಳೊಂದಿಗೆ ಸ್ನೇಹಕ್ಕಾಗಿ ಪ್ರಾಮುಖ್ಯತೆ ಮತ್ತು ಆದ್ಯತೆಯನ್ನು ನೀಡುತ್ತೇನೆ ಎಂದು ಅವರು ಹೇಳಿದರು.

ಉಭಯ ದೇಶಗಳ ನಡುವಿನ ಬಾಂಧವ್ಯವು ತಮ್ಮ ನಾಗರಿಕರ ಒಳಿತಿಗಾಗಿ ಇರಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...